ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್‌ಟಿಸಿ) ಸುಮಾರು 4 ಸಾವಿರ ಬಸ್‌ಗಳು ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿರುವುದರಿಂದ ಮೇ 11 ಮತ್ತು 12 ರಂದು ಎರಡು ದಿನ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ. 

ಬೆಂಗಳೂರು (ಮೇ. 09): ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್‌ಟಿಸಿ) ಸುಮಾರು 4 ಸಾವಿರ ಬಸ್‌ಗಳು ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿರುವುದರಿಂದ ಮೇ 11 ಮತ್ತು 12 ರಂದು ಎರಡು ದಿನ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೇ 12 ರಂದು ಮತದಾನ ಪ್ರಕ್ರಿಯೆ ನಡೆಯುವುದರಿಂದ ಮೇ 11 ರಂದು ಚುನಾವಣಾ ಸಿಬ್ಬಂದಿ ನಿಗದಿತ ಮತಗಟ್ಟೆಗಳಿಗೆ ತೆರಳುತ್ತಾರೆ. ಅಂತೆಯೆ ಪೊಲೀಸರು ಕೂಡ ತೆರಳಿ ಮೊಕ್ಕಾಂ ಹೂಡುತ್ತಾರೆ. ನಿಗಮದಲ್ಲಿ ಒಟ್ಟು 8800 ಬಸ್‌ಗಳಿದ್ದು, ಈ ಪೈಕಿ 4 ಸಾವಿರ ಬಸ್‌ಗಳು ಚುನಾವಣಾ ಕಾರ್ಯಕ್ಕೆ ನಿಯೋಜನೆ ಗೊಂಡಿರುವುದರಿಂದ ರಾಜ್ಯದ ಬಹುತೇಕ ಮಾರ್ಗಗಳಲ್ಲಿ ಈ ಎರಡೂ ದಿನ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಇದರಿಂದ ರಾಜ್ಯದ ವಿವಿಧೆಡೆ ತೆರಳುವಪ್ರಯಾಣಿಕರಿಗೆ ಸಮಸ್ಯೆಯಾಗಲಿದೆ. ಬೆಂಗಳೂರು ಮಹಾನಗರ ಸಾರಿಗೆ ನಿಗಮದಿಂದಲೂ(ಬಿಎಂಟಿಸಿ) ಒಂದು ಸಾವಿರಕ್ಕೂ ಹೆಚ್ಚು ಬಸ್‌ಗಳನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ.