ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್‌ಟಿಸಿ) ಸುಮಾರು 4 ಸಾವಿರ ಬಸ್‌ಗಳು ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿರುವುದರಿಂದ ಮೇ 11 ಮತ್ತು 12 ರಂದು ಎರಡು ದಿನ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ. 

ಬೆಂಗಳೂರು (ಮೇ. 09): ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್‌ಟಿಸಿ) ಸುಮಾರು 4 ಸಾವಿರ ಬಸ್‌ಗಳು ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿರುವುದರಿಂದ ಮೇ 11 ಮತ್ತು 12 ರಂದು ಎರಡು ದಿನ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ. 

Add Asianetnews Kannada as a Preferred SourcegooglePreferred

ಮೇ 12 ರಂದು ಮತದಾನ ಪ್ರಕ್ರಿಯೆ ನಡೆಯುವುದರಿಂದ ಮೇ 11 ರಂದು ಚುನಾವಣಾ ಸಿಬ್ಬಂದಿ ನಿಗದಿತ ಮತಗಟ್ಟೆಗಳಿಗೆ ತೆರಳುತ್ತಾರೆ. ಅಂತೆಯೆ ಪೊಲೀಸರು ಕೂಡ ತೆರಳಿ ಮೊಕ್ಕಾಂ ಹೂಡುತ್ತಾರೆ. ನಿಗಮದಲ್ಲಿ ಒಟ್ಟು 8800 ಬಸ್‌ಗಳಿದ್ದು, ಈ ಪೈಕಿ 4 ಸಾವಿರ ಬಸ್‌ಗಳು ಚುನಾವಣಾ ಕಾರ್ಯಕ್ಕೆ ನಿಯೋಜನೆ ಗೊಂಡಿರುವುದರಿಂದ ರಾಜ್ಯದ ಬಹುತೇಕ ಮಾರ್ಗಗಳಲ್ಲಿ ಈ ಎರಡೂ ದಿನ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಇದರಿಂದ ರಾಜ್ಯದ ವಿವಿಧೆಡೆ ತೆರಳುವಪ್ರಯಾಣಿಕರಿಗೆ ಸಮಸ್ಯೆಯಾಗಲಿದೆ. ಬೆಂಗಳೂರು ಮಹಾನಗರ ಸಾರಿಗೆ ನಿಗಮದಿಂದಲೂ(ಬಿಎಂಟಿಸಿ) ಒಂದು ಸಾವಿರಕ್ಕೂ ಹೆಚ್ಚು ಬಸ್‌ಗಳನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ.