’ಕನ್ನಡಿಗ’ ಮೋದಿಗೆ ಸಿದ್ದರಾಮಯ್ಯ ’ಕನ್ನಡ’ ಸವಾಲ್!
ಕರ್ನಾಟಕ ವಿಧಾನಸಬಾ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳೊಂದಿಗೆ ಕಳೆದ ವಾರ ನಡೆಸಿದ ಸಭೆಯಲ್ಲಿ, ಪ್ರಧಾನಿ ಮೋದಿ, ತಾನೂ ಕನ್ನಡಿಗ, ಕರ್ನಾಟಕ ಬಿಜೆಪಿ ಕಾರ್ಯಕರ್ತ ಎಂದಿದ್ದರು. ಇದೀಗ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ.
ಬೆಂಗಳೂರು (ಮೇ. 01): ಕರ್ನಾಟಕ ವಿಧಾನಸಬಾ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳೊಂದಿಗೆ ಕಳೆದ ವಾರ ನಡೆಸಿದ ಸಭೆಯಲ್ಲಿ, ಪ್ರಧಾನಿ ಮೋದಿ, ತಾನೂ ಕನ್ನಡಿಗ, ಕರ್ನಾಟಕ ಬಿಜೆಪಿ ಕಾರ್ಯಕರ್ತ ಎಂದಿದ್ದರು. ಇದೀಗ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಕನ್ನಡದ ಬದ್ಧತೆ ಬಗ್ಗೆ ಪ್ರಶ್ನೆಗಳನ್ನು ಕೇಳಿದ್ದಾರೆ.
#AnswerMadiModi ಎಂಬ ಹ್ಯಾಷ್ಟ್ಯಾಗ್ ಬಳಸಿ ಸಿದ್ದರಾಮಯ್ಯ ಮೋದಿಯವರಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.
ಕನ್ನಡಿಗನೆಂದು ಘೋಷಿಸಿಕೊಂಡ ಪ್ರಧಾನಿ @narendramodi ಅವರಿಗೆ ಅಭಿನಂದನೆ.
— Siddaramaiah (@siddaramaiah) April 30, 2018
ಕನ್ನಡಿಗನಾಗುವುದೆಂದರೆ....
ನಾಡಭಾಷೆ, ನಾಡಗೀತೆ, ನಾಡಧ್ವಜವನ್ನು ಒಪ್ಪಿಕೊಳ್ಳುವುದು.
ಕರ್ನಾಟಕದ ನಾಡಧ್ವಜಕ್ಕೆ ಅಂಗೀಕಾರ ನೀಡಿ, ನಿಜವಾದ ಕನ್ನಡಿಗರಾಗುವಿರಾ?. #AnswerMadiModi
ಕನ್ನಡಿಗನಾಗುವುದೆಂದರೆ...
— Siddaramaiah (@siddaramaiah) April 30, 2018
ಬಲತ್ಕಾರದ ಹಿಂದಿ ಹೇರಿಕೆಯನ್ನು ಕೈಬಿಡುವುದು, ಕನ್ನಡಕ್ಕೆ ಪ್ರಾಮುಖ್ಯ ಕೊಡುವುದು.
ಕನ್ನಡಿಗರಾಗಲು ಸಿದ್ದ ಇದ್ದೀರಾ?#AnswerMaadiModi
ಕನ್ನಡಿಗನಾಗುವುದೆಂದರೆ...
— Siddaramaiah (@siddaramaiah) April 30, 2018
ನೆಲ,ಜಲ,ಭಾಷೆಯ ರಕ್ಷಣೆಗೆ ಬದ್ದವಾಗಿರುವುದು.
ಮಹದಾಯಿ ನೀರು ಹಂಚಿಕೆ ವಿವಾದ ಬಗೆಹರಿಸಲು ಮೂರು ರಾಜ್ಯಗಳ ಸಭೆ ಕರೆದು ಕನ್ನಡಿಗರಾಗುವಿರಾ?#AnswerMaadiModi
ಕನ್ನಡಿಗನಾಗುವುದೆಂದರೆ....
— Siddaramaiah (@siddaramaiah) April 30, 2018
ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆ.
ರಾಷ್ಟೀಕೃತ ಬ್ಯಾಂಕುಗಳ ಪ್ರವೇಶ ಪರೀಕ್ಷೆಯನ್ನು ಕನ್ನಡಿಗರಿಗೆ ಕನ್ನಡದಲ್ಲಿ ಬರೆಯಲು ಅವಕಾಶ ನೀಡಿ ಕನ್ನಡಿಗರಾಗುವಿರಾ?#AnswerMaadiModi
ಕನ್ನಡಿಗನಾಗುವುದೆಂದರೆ...
— Siddaramaiah (@siddaramaiah) April 30, 2018
ಈ ನೆಲದ ಶರಣರು, ಸಂತರು, ದಾಸರು, ಸೂಫಿಗಳು ಹುಟ್ಟುಹಾಕಿದ ಸೌಹಾರ್ದ ಪರಂಪರೆಯನ್ನು ಗೌರವಿಸುವುದು.
ಒಬ್ಬನೇ ಒಬ್ಬ ಮುಸ್ಲಿಮ್,ಕ್ರಿಶ್ಚಿಯನ್ಗೆ ಚುನಾವಣೆಯಲ್ಲಿ ಟಿಕೆಟ್ ನೀಡದೆ ನಿಮಗೆ ನಿಜವಾದ ಕನ್ನಡಿಗರಾಗಲು ಸಾಧ್ಯವೇ?#AnswerMaadiModi