ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ತಮ್ಮ ವೋಟನ್ನು ತಮಗೇ ಹಾಕಿಕೊಳ್ಳದ ಪರಿಸ್ಥಿತಿ ಉಂಟಾಗಿದೆ. ಸಿದ್ದರಾಮಯ್ಯ ಅವರ ಹೆಸರು ಸ್ವಗ್ರಾಮವಾದ ಸಿದ್ದರಾಮನಹುಂಡಿಯ ಮತಗಟ್ಟೆಯಲ್ಲಿದೆ.
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ತಮ್ಮ ವೋಟನ್ನು ತಮಗೇ ಹಾಕಿಕೊಳ್ಳದ ಪರಿಸ್ಥಿತಿ ಉಂಟಾಗಿದೆ. ಸಿದ್ದರಾಮಯ್ಯ ಅವರ ಹೆಸರು ಸ್ವಗ್ರಾಮವಾದ ಸಿದ್ದರಾಮನಹುಂಡಿಯ ಮತಗಟ್ಟೆಯಲ್ಲಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಅದು ವರುಣ ಕ್ಷೇತ್ರದ ವ್ಯಾಪ್ತಿಯಲ್ಲಿದೆ. ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ. ಹೀಗಾಗಿ ಅವರು ಈ ಬಾರಿ ವರುಣ ಕ್ಷೇತ್ರ ದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ತಮ್ಮ ಪುತ್ರ ಡಾ. ಎಸ್.ಯತೀಂದ್ರ ಅವರಿಗೆ ಮತ ಚಲಾಯಿಸಬೇಕಾಗಿದೆ.
ಆದ್ದರಿಂದ ತಾವು ನಿಂತ ಕ್ಷೇತ್ರದಿಂದ ಸಿಎಂ ವೋಟ್ ಹಾಕಿಕೊಳ್ಳಲು ಸಾಧ್ಯವಿಲ್ಲದ್ದರಿಂದ ತಮ್ಮ ವೋಟನ್ನು ಬೇರೆಯವರಿಗೆ ಹಾಕಬೇಕಾಗಿದೆ.
