ಕಾಂಗ್ರೆಸ್-ಬಿಜೆಪಿ ಗಲಾಟೆಯಲ್ಲಿ ಈ ಊರಿಗೆ ನೀರೇ ಇಲ್ಲ!
ಕಾಂಗ್ರೆಸ್ - ಬಿಜೆಪಿ ಕಾರ್ಯಕರ್ತರ ನಡುವಿನ ಜಗಳದಿಂದಾಗಿ 2 ದಿನಗಳಿಂದ ಕುಷ್ಟಗಿ ತಾಲೂಕಿನ ತುಮರಿಕೊಪ್ಪ ಗ್ರಾಮದಲ್ಲಿ ನೀರೇ ಇಲ್ಲ! ಶಾಸಕ ದೊಡ್ಡನಗೌಡ ಪಾಟೀಲ್ ಪ್ರಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿ ಪಡಿಸಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ.
ಕೊಪ್ಪಳ (ಏ. 29): ಕಾಂಗ್ರೆಸ್ - ಬಿಜೆಪಿ ಕಾರ್ಯಕರ್ತರ ನಡುವಿನ ಜಗಳದಿಂದಾಗಿ 2 ದಿನಗಳಿಂದ ಕುಷ್ಟಗಿ ತಾಲೂಕಿನ ತುಮರಿಕೊಪ್ಪ ಗ್ರಾಮದಲ್ಲಿ ನೀರೇ ಇಲ್ಲ! ಶಾಸಕ ದೊಡ್ಡನಗೌಡ ಪಾಟೀಲ್ ಪ್ರಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿ ಪಡಿಸಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ.
ರೊಚ್ಚಿಗೆದ್ದ ಗ್ರಾಮ ಪಂಚಾಯತ್ ಕಾಂಗ್ರೆಸ್ ಸದಸ್ಯರು ಗ್ರಾಮಕ್ಕೆ ನೀರು ಕಟ್ ಮಾಡಿದ್ದಾರೆ. ಕಾಂಗ್ರೆಸ್- ಬಿಜೆಪಿ ಇಬ್ಬರ ನಡುವಿನ ಗಲಾಟೆಯಿಂದ ಗ್ರಾಮಕ್ಕೆ ನೀರನ್ನು ಕಡಿತಗೊಳಿಸಲಾಗಿದ್ದು ನೀರಿಗಾಗಿ 2 ದಿನಗಳಿಂದ ತುಮರಿಕೊಪ್ಪ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಎರಡು ಪಕ್ಷಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಕ್ಕೆ ಹನುಮಸಾಗರ ಪೊಲೀಸರು ಭೇಟಿ ನೀಡಿದ್ದಾರೆ.