ಚುನಾವಣಾ ಫಲಿತಾಂಶದ ನಂತರ ಕ್ಷಣ ಕ್ಷಣಕ್ಕೂ ರಾಜ್ಯ ರಾಜಕಾರಣ ತಿರುವು ಪಡೆದುಕೊಳ್ಳುತ್ತಿದೆ. ಸರ್ಕಾರ ರಚಿಸುವ ಸರ್ಕಸ್ ನಡೆಯುತ್ತಿದೆ.  ಕಾಂಗ್ರೆಸ್ ಪಕ್ಷ ತಮ್ಮ ಶಾಸಕರು ಪಕ್ಷ ಬಿಟ್ಟು ಹೋಗದಂತೆ ಹೈ ಅಲರ್ಟ್ ಆಗಿದೆ.  

ಬೀದರ್ (ಮೇ. 16): ಚುನಾವಣಾ ಫಲಿತಾಂಶದ ನಂತರ ಕ್ಷಣ ಕ್ಷಣಕ್ಕೂ ರಾಜ್ಯ ರಾಜಕಾರಣ ತಿರುವು ಪಡೆದುಕೊಳ್ಳುತ್ತಿದೆ. ಸರ್ಕಾರ ರಚಿಸುವ ಸರ್ಕಸ್ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷ ತಮ್ಮ ಶಾಸಕರು ಪಕ್ಷ ಬಿಟ್ಟು ಹೋಗದಂತೆ ಹೈ ಅಲರ್ಟ್ ಆಗಿದೆ.

Add Asianetnews Kannada as a Preferred SourcegooglePreferred

ಬೀದರ್ ಜಿಲ್ಲೆಯ ನಾಲ್ಕು ಜನ ಶಾಸಕರನ್ನು ಕರೆ ತರುವ ಉಸ್ತುವಾರಿಯನ್ನು ಕೈ ಹೈಕಮಾಂಡ್ ಆಯಾ ಜಿಲ್ಲೆಯ ಮುಖಂಡರಿಗೆ ಒಪ್ಪಿಸಿದೆ. ಬೀದರ್ ಜಿಲ್ಲೆಯ ನಾಲ್ಕು ಶಾಸಕರನ್ನು ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಕರೆಸಿಕೊಳ್ಳಲಿದೆ. 

ಮಧ್ಯ ರಾತ್ರಿಯೇ ಬೀದರ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನ ಬಂದಿದೆ. ಆ ವಿಮಾನದ ಮೂಲಕ ಬೀದರ್ ಜಿಲ್ಲಾಧ್ಯಕ್ಷ ಬಸವರಾಜ್ ಜಾಬಶೆಟ್ಟಿ, ವಿಧಾನ ಪರಿಷತ್ ಸದಸ್ಯೆ ವಿಜಯಸಿಂಗ್ , ಭಾಲ್ಕಿ ಕ್ಷೇತ್ರದ ಶಾಸಕ ಈಶ್ವರ ಖಂಡ್ರೆ, ಹುಮನಾಬಾದ ಶಾಸಕ ರಾಜಶೇಖರ ಪಾಟೀಲ್ , ಬಸವಕಲ್ಯಾಣ ಶಾಸಕ ಬಿ.ನಾರಾಯಣರಾವ್, ಬೀದರ್ ನಗರದ ಶಾಸಕ ರಹೀಮ್ ಖಾನ್ ಸೇರಿದಂತೆ ಒಟ್ಟು 6 ಆರು ಜನ ಬೀದರ್ ನಿಂದ ಬೆಂಗಳೂರನತ್ತ ಹೊರಟ್ಟಿದ್ದಾರೆ.