ಸೋಲಿನ ಸನ್ನಿಹಿತ : ಬಾವುಟ ತೆರವುಗೊಳಿಸಿದ ಕೈ ಕಾರ್ಯಕರ್ತರು
ಕರ್ನಾಟಕದಲ್ಲಿ ಮೋದಿ ಅಲೆ ವರ್ಕೌಟ್ ಆಗಿದ್ದು, ಈಗಾಗಲೇ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ ಐವರು ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ. ಸೋಲಿನ ಭೀತಿಯಲ್ಲಿರುವ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಹಾಕಿದ್ದ ಬಾವುಟಗಳನ್ನು ತೆರವುಗೊಳಿಸಿದ್ದಾರೆ.
ಬೆಂಗಳೂರು : ಕರ್ನಾಟಕದಲ್ಲಿ ಮೋದಿ ಅಲೆ ವರ್ಕೌಟ್ ಆಗಿದ್ದು, ಈಗಾಗಲೇ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ ಐವರು ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ.
ಈಗಾಗಲೇ ಕಾಂಗ್ರೆಸ್ ಮೂವರು ಅಭ್ಯರ್ಥಿಗಳು ವಿಜಯಿಯಾಗಿದ್ದಾರೆ. ಇನ್ನು ಜೆಡಿಎಸ್ ಕೂಡ ತನ್ನ ಖಾತೆ ತೆರೆದಿದ್ದು, 2 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸೋಲಿನ ಬಗ್ಗೆ ಖಚಿತವಾಗಿರುವ ಕಾರ್ಯರ್ತರು ಬೆಂಗಳೂರಿನಲ್ಲಿ ಹಾಕಿದ್ದ ತಮ್ಮ ಪಕ್ಷ ಬಾವುಟಗಳನ್ನು ತೆರವುಗೊಳಿಸಿದ್ದಾರೆ. ಪ್ರಚಾರದ ವೇಳೆ ಗೆಲುವಿನ ಭರವಸೆಯೊಂದಿಗೆ ಹಾಕಿದ್ದ ತಮ್ಮ ಪಕ್ಷದ ಬಾವುಟಗಳನ್ನು ತೆಗೆದಿದ್ದಾರೆ.