ರಾಜಧಾನಿಯಲ್ಲಿ ಮಂಗಳವಾರ ಸ್ಫೋಟಗೊಂಡ 9700 ಕ್ಕೂ ಹೆಚ್ಚು ಮತದಾರರ ಗುರುತಿನ ಚೀಟಿ ಪತ್ತೆ ಪ್ರಕರಣದ ಗಂಭೀರ ಸ್ವರೂಪದ್ದಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗದ ಹಿರಿಯ ಅಧಿಕಾರಿಗಳು ಬುಧವಾರ ಬೆಂಗಳೂರಿಗೆ ಆಗಮಿಸಿದ್ದು, ಗುರುವಾರ ಈ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.
ಬೆಂಗಳೂರು: ರಾಜಧಾನಿಯಲ್ಲಿ ಮಂಗಳವಾರ ಸ್ಫೋಟಗೊಂಡ 9700 ಕ್ಕೂ ಹೆಚ್ಚು ಮತದಾರರ ಗುರುತಿನ ಚೀಟಿ ಪತ್ತೆ ಪ್ರಕರಣದ ಗಂಭೀರ ಸ್ವರೂಪದ್ದಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗದ ಹಿರಿಯ ಅಧಿಕಾರಿಗಳು ಬುಧವಾರ ಬೆಂಗಳೂರಿಗೆ ಆಗಮಿಸಿದ್ದು, ಗುರುವಾರ ಈ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ರಾಜರಾಜೇಶ್ವರಿ ನಗರದ ಕ್ಷೇತ್ರ ವ್ಯಾಪ್ತಿಯ ಜಾಲಹಳ್ಳಿ ಬಳಿ ಎಸ್ಎಲ್ವಿ ಅಪಾರ್ಟ್ಮೆಂಟ್ ಮೇಲೆ ಮಂಗಳವಾರ ದಾಳಿ ನಡೆಸಿದ ವಿಚಕ್ಷಣಾ ದಳವು, ಅಲ್ಲಿ ಸಂಗ್ರಹಿಸಿಡಲಾಗಿದ್ದ9746 ಮತದಾರರ ಗುರುತಿನ ಚೀಟಿಗಳನ್ನು ಜಪ್ತಿ ಮಾಡಿತ್ತು.
ಈ ಕೃತ್ಯ ಬೆಳಕಿಗೆ ಬಂದಕೂಡಲೇ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ತಡರಾತ್ರಿವರೆಗೂ ಆರೋಪ- ಪ್ರತ್ಯಾರೋಪ ಮಾಡಿದರು. ಇನ್ನೊಂದೆಡೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಚುನಾವಣಾ ಆಯೋಗವು, ತನ್ನ ಉಸ್ತುವಾರಿಯಲ್ಲಿ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿದೆ.
