ಕಾಂಗ್ರೆಸ್ ಮೈತ್ರಿಗೆ ಕುಮಾರಸ್ವಾಮಿ ಒಪ್ಪಿಗೆ : ಸಿಎಂ ಪಟ್ಟ ಖಚಿತ
ಸರ್ಕಾರ ರಚಿಸಲು ಮ್ಯಾಜಿಕ್ ನಂಬರ್ 112 ಬಾರದ ಕಾರಣ ಜೆಡಿಎಸ್ ಜೊತೆ ಮೈತ್ರಿಯೊಂದಿಗೆ ಸರ್ಕಾರ ರಚಿಸಲು ಕಾಂಗ್ರೆಸ್ ಯೋಜನೆ ರೂಪಿಸಿದ್ದು ಕುಮಾರಸ್ವಾಮಿಗೆ ಮುಖ್ಯಮಂತ್ರಿ ಸ್ಥಾನದ ಅವಕಾಶ ನೀಡುವುದ್ದಾಗಿ ಫಲಿತಾಂಶ ಅಂತಿಮಗೊಂಡ ಕೆಲವೇ ಗಂಟೆಗಳಲ್ಲಿ ತಿಳಿಸಿದ್ದರು.
ಬೆಂಗಳೂರು(ಮೇ.15): ಕಾಂಗ್ರೆಸ್ ನೀಡಿರುವ ಮೈತ್ರಿ ಪ್ರಸ್ತಾವವನ್ನು ಜೆಡಿಎಸ್ ಕಾರ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಒಪ್ಪಿಗೆ ಸೂಚಿಸಿದ್ದಾರೆ.
ಒಪ್ಪಿಗೆ ಸೂಚಿತ ಪತ್ರದೊಂದಿಗೆ ಇಂದು ಸಂಜೆ 5.30 ರಿಂದ 6 ಗಂಟೆಗೆ ರಾಜ್ಯಪಾಲರ ಭೇಟಿಗೆ ಅವಕಾಶವನ್ನು ಕೋರಿದ್ದಾರೆ. ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ 104, ಕಾಂಗ್ರೆಸ್ 78 ಹಾಗೂ ಜೆಡಿಎಸ್ 37, ಬಿಎಸ್'ಪಿ 1, ಇತರರರು 2 ಸ್ಥಾನ ಪಡೆದುಕೊಂಡಿದ್ದಾರೆ.
ಸರ್ಕಾರ ರಚಿಸಲು ಮ್ಯಾಜಿಕ್ ನಂಬರ್ 112 ಬಾರದ ಕಾರಣ ಜೆಡಿಎಸ್ ಜೊತೆ ಮೈತ್ರಿಯೊಂದಿಗೆ ಸರ್ಕಾರ ರಚಿಸಲು ಕಾಂಗ್ರೆಸ್ ಯೋಜನೆ ರೂಪಿಸಿದ್ದು ಕುಮಾರಸ್ವಾಮಿಗೆ ಮುಖ್ಯಮಂತ್ರಿ ಸ್ಥಾನದ ಅವಕಾಶ ನೀಡುವುದ್ದಾಗಿ ಫಲಿತಾಂಶ ಅಂತಿಮಗೊಂಡ ಕೆಲವೇ ಗಂಟೆಗಳಲ್ಲಿ ತಿಳಿಸಿದ್ದರು. ಈ ಬಗ್ಗೆ ಸ್ವತಃ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದರು.
ಇಂದು ಸಂಜೆ ಕುಮಾರಸ್ವಾಮಿ ಒಳಗೊಂಡಂತೆ ಪ್ರಮುಖ ನಾಯಕರು ರಾಜ್ಯಪಾಲರನ್ನು ಭೇಟಿ ಮಾಡಲಿದ್ದಾರೆ. ಇತ್ತ ದೇವೇಗೌಡರ ಮನೆಯಲ್ಲಿ ಎರಡೂ ಪಕ್ಷದ ನಾಯಕರು ಸಚಿವ ಸ್ಥಾನದ ಬಗ್ಗೆ ಚರ್ಚೆ ನಡೆಸಲಿದ್ದಾರೆ.