ಚುನಾವಣೆಗೂ ಮುನ್ನ ಬಾದಾಮಿಯಲ್ಲಿ ಕಾಂಗ್ರೆಸ್​​ಗೆ ಬಿಗ್ ಶಾಕ್ ದೊರಕಿದೆ. ಕಾಂಗ್ರೆಸ್ ಮುಖಂಡನ ಸಂಬಂಧಿ ಒಡೆತನದ ರೆಸಾರ್ಟ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  

ಬಾದಾಮಿ : ಚುನಾವಣೆಗೂ ಮುನ್ನ ಬಾದಾಮಿಯಲ್ಲಿ ಕಾಂಗ್ರೆಸ್​​ಗೆ ಬಿಗ್ ಶಾಕ್ ದೊರಕಿದೆ. ಕಾಂಗ್ರೆಸ್ ಮುಖಂಡನ ಸಂಬಂಧಿ ಒಡೆತನದ ರೆಸಾರ್ಟ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಧ್ಯ ರಾತ್ರಿ ವೇಳೆ ಕಾರ್ಯಾಚರಣೆಗೆ ಇಳಿದ ಐಟಿ ಅಧಿಕಾರಿಗಳು ಬಾದಾಮಿ ಹೊರವಲಯದ ರೆಸಾರ್ಟ್​​ನಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಸುಮಾರು 8 ರಿಂದ 10 ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ.

ವಿಜಯನಗರ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಆನಂದ್ ಸಿಂಗ್ ಸಂಬಂಧಿ ಒಡೆತನದ ರೆಸಾರ್ಟ್ ಇದಾಗಿದ್ದು, ಪಾಂಡುರಂಗ ಸಿಂಗ್​ ಎನ್ನುವವರಿಗೆ ಸೇರಿದ್ದಾಗಿದೆ. ರೆಸಾರ್ಟ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದ ವೇಳೆ ರೆಸಾರ್ಟ್​ನಲ್ಲಿ ಸಿದ್ದರಾಮಯ್ಯ ಆಪ್ತ ಸಿಎಂ ಇಬ್ರಾಹಿಂ ಅವರು ಇದ್ದರು ಎನ್ನಲಾಗಿದೆ.

ಇನ್ನು ಸಿಆರ್​ಪಿ ಎಫ್ ಹಾಗೂ ಸಿವಿಲ್ ಪೊಲೀಸ್​ರಿಂದ ರೆಸಾರ್ಟ್​ಗೆ ಬಿಗಿ ಭದ್ರತೆ ಒದಗಿಸಲಾಗಿದೆ.