Asianet Suvarna News Asianet Suvarna News

ವರುಣಾ ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್ ಗೊಂದಲಕ್ಕೆ ತೆರೆ

ಕೊನೆ ಕ್ಷಣದಲ್ಲಿ ಅಭ್ಯರ್ಥಿ ಬದಲಿಸುವ ನಿರ್ಧಾರವನ್ನು ಜೆಡಿಎಸ್ ಕೈಬಿಟ್ಟಿದ್ದು ಈ ಮೊದಲು ಘೋಷಿಸಿದ್ದ ಅಭಿಷೇಕ್ ನಾಮಪತ್ರ ಸಲ್ಲಿಸಿದ್ದಾರೆ. ಸದ್ದುಗದ್ದಲವಿಲ್ಲದೆ ಬೆರಳಣಿಕೆಯಷ್ಟು ಕಾರ್ಯಕರ್ತರೊಂದಿಗೆ ಆಗಮಿಸಿದ ಅಭಿಷೇಕ್ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಇದೇ ಕ್ಷೇತ್ರಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರನ್ನು ಕಣಕ್ಕಿಳಿಸಿತ್ತು

JDS Candidate Contest Varuna Constituency at Karnataka Assembly Election 2018

ಮೈಸೂರು(ಏ.24): ಮುಖ್ಯಮಂತ್ರಿ ಪುತ್ರ ಯತೀಂದ್ರ ಸ್ಪರ್ಧಿಸಿರುವ ಪ್ರತಿಷ್ಠಿತ ವರುಣಾ ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್ ಗೊಂದಲಕ್ಕೆ ತೆರೆ ಬಿದ್ದಿದ್ದು ಕಣದಿಂದ ಜಿ.ಟಿ.ದೇವೇಗೌಡ ಪುತ್ರ ಹರೀಶ್ ಗೌಡ ಹಿಂದೆ ಸರಿದಿದ್ದಾರೆ.

ಕೊನೆ ಕ್ಷಣದಲ್ಲಿ ಅಭ್ಯರ್ಥಿ ಬದಲಿಸುವ ನಿರ್ಧಾರವನ್ನು ಜೆಡಿಎಸ್ ಕೈಬಿಟ್ಟಿದ್ದು ಈ ಮೊದಲು ಘೋಷಿಸಿದ್ದ ಅಭಿಷೇಕ್ ನಾಮಪತ್ರ ಸಲ್ಲಿಸಿದ್ದಾರೆ. ಸದ್ದುಗದ್ದಲವಿಲ್ಲದೆ ಬೆರಳಣಿಕೆಯಷ್ಟು ಕಾರ್ಯಕರ್ತರೊಂದಿಗೆ ಆಗಮಿಸಿದ ಅಭಿಷೇಕ್ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಇದೇ ಕ್ಷೇತ್ರಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರನ್ನು ಕಣಕ್ಕಿಳಿಸಿತ್ತು. ನಿನ್ನೆಯಷ್ಟೆ ಅಭ್ಯರ್ಥಿಯನ್ನು ಬದಲಿಸಿತ್ತು. ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಏ.27 ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನವಾಗಿದೆ.         

Follow Us:
Download App:
  • android
  • ios