ಈಗಾಗಲೇ ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಕೆಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದಲ್ಲಿ ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಇದುವರೆಗೆ ಕಾಂಗ್ರೆಸ್ 66 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ  110 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.  ಜೆಡಿಎಸ್ 45 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 

ಬೆಂಗಳೂರು : ಈಗಾಗಲೇ ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಕೆಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದಲ್ಲಿ ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಇದುವರೆಗೆ ಕಾಂಗ್ರೆಸ್ 66 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ 110 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಜೆಡಿಎಸ್ 45 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹುಬ್ಬಳ್ಳಿ ಧಾರವಾಡ ಗ್ರಾಮಾಂತರದಲ್ಲಿ ಜಗದೀಶ್ ಶೆಟ್ಟರ್ ಮುನ್ನಡೆ ಸಾಧಿಸಿದ್ದಾರೆ. 

ಮಂಡ್ಯದ 7 ಕ್ಷೇತ್ರಗಳಲ್ಲಿ ಜೆಡಿಎಸ್ ಮುನ್ನಡೆ ಸಾಧಿಸಿದೆ. 

 ಬಿಟಿಎಂ ಲೇ ಔಟ್ ಕ್ಷೇತ್ರದ ಅಭ್ಯರ್ಥಿ ರಾಮಲಿಂಗಾರೆಡ್ಡಿ ಮುನ್ನಡೆ ಸಾಧಿಸಿದ್ದಾರೆ. 

ಬಾದಾಮಿಯಲ್ಲಿ ಶ್ರೀ ರಾಮುಲು ಕೇವಲ 295 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. 

ರಾಮನಗರದಲ್ಲಿ 7,342 ಮತಗಳಿಂದ ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ. ಬಾಗಲಕೋಟೆಯಲ್ಲಿ ಎಚ್.ವೈ ಮೇಟಿ ಮುನ್ನಡೆ ಸಾಧಿಸಿದ್ದಾರೆ.

ಬಳ್ಳಾರಿ ನಗರದಲ್ಲಿ ಸೋಮಶೇಖರ ರೆಡ್ಡಿ ಮುನ್ನಡೆ ಸಾಧಿಸಿದ್ದಾರೆ. 

ಚಾಮರಾಜ ಪೇಟೆಯಲ್ಲಿ ಜಮೀರ್ ಅಹ್ಮದ್ ಮುನ್ನಡೆ ಸಾಧಿಸಿದ್ದಾರೆ.

ಮೊಳಕಾಲ್ಮೂರಿನಲ್ಲಿ 7,215 ಮತಗಳಿಂದ ಶ್ರೀ ರಾಮುಲು ಮುನ್ನಡೆ ಸಾಧಿಸಿದ್ದಾರೆ. 

ರಾಮಲಿಂಗಾ ರೆಡ್ಡಿ 11,272 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. 

ಶಿಕಾರಿಪುರದಲ್ಲಿ ಬಿ.ಎಸ್ ಯಡಿಯೂರಪ್ಪ 9,800 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.