ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯಗೆ ಮತ್ತೊಂದು ಹಿನ್ನಡೆ
- ನಿವೃತ್ತ ಐಪಿಎಸ್ ರೇವಣ್ಣ ಸಿದ್ದಯ್ಯ ಕಾಂಗ್ರೆಸ್’ಗೆ ಗುಡ್ ಬೈ
- ಚಾಮುಂಡೇಶ್ವರಿ, ವರುಣಾದಲ್ಲಿ ಕಾಂಗ್ರೆಸ್ ವಿರುದ್ಧ ಪ್ರಚಾರ ನಡೆಸಲು ತೀರ್ಮಾನ
ಮೈಸೂರು ಭಾಗದ ಪ್ರಮುಖ ಲಿಂಗಾಯತ ಮುಖಂಡರಾಗಿ ಗುರುತಿಸಿಕೊಂಡಿರುವ ನಿವೃತ್ತ ಐಪಿಎಸ್ ಅಧಿಕಾರಿ ರೇವಣ್ಣ ಸಿದ್ದಯ ಕಾಂಗ್ರೆಸ್’ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಸಿದ್ದರಾಮಯ್ಯ ಹಾಗೂ ಅವರ ಪುತ್ರ ತನ್ನನ್ನು ಬಳಸಿಕೊಂಡಿದ್ದಾರೆ, ಬಳಿಕ ತುಳಿದು ಮೂಲೆಗುಂಪು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಾಮುಂಡೇಶ್ವರಿ ಹಾಗೂ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಪ್ರಚಾರ ಮಾಡುವುದಾಗಿ ಅವರು ಹೇಳಿದ್ದಾರೆ.