Asianet Suvarna News Asianet Suvarna News

ಪಕ್ಷೇತರ ಅಭ್ಯರ್ಥಿ ಹೈ ಜಾಕ್ ಮಾಡಿದ ಡಿ.ಕೆ ಶಿವಕುಮಾರ್

ಮುಳಬಾಗಿಲಿನಲ್ಲಿ ಗೆದ್ದಿರುವ ಎಚ್.ನಾಗೇಶ್ ಮೂಲತಃ ಕಾಂಗ್ರೆಸ್ ನಾಯಕರು, ಅವರನ್ನು ಈ ಚುನಾವಣೆಯಲ್ಲಿ ನಮ್ಮ ಪಕ್ಷ ಬೆಂಬಲಿಸಿದೆ. ಈಗ ಸರ್ಕಾರ ರಚನೆಯಲ್ಲಿ ಅವರ ಪಾತ್ರ ಅತಿಮುಖ್ಯವಾಗಿರುವು ದರಿಂದ ತಮ್ಮೊಂದಿಗೆ ಕರೆದುಕೊಂಡು ಹೋಗಲಾಗುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

Karnataka elections results: DK Shivakumar meets independent candidate

ಕೋಲಾರ: ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಮುಳಬಾಗಿಲು ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿರುವ ಎಚ್.ನಾಗೇಶ್ ಅವರನ್ನು ಡಿ.ಕೆ. ಶಿವಕುಮಾರ್ ಅವರು ಖುದ್ದಾಗಿ ಕೋಲಾರಕ್ಕೆ ಆಗಮಿಸಿ ತಮ್ಮೊಂದಿಗೆ ಕರೆದೊಯ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಜಾತ್ಯತೀತ ಪಕ್ಷಗಳೇ ಅಧಿಕಾರಕ್ಕೆ ಬರಲಿವೆ, ಯಾವುದೇ ಕಾರಣಕ್ಕೂ ಬಿಜೆಪಿ ಸರ್ಕಾರ ರಚನೆಗೆ ಅವಕಾಶ ನೀಡುವುದಿಲ್ಲ ಎಂದರು.

ಮುಳಬಾಗಿಲಿನಲ್ಲಿ ಗೆದ್ದಿರುವ ಎಚ್.ನಾಗೇಶ್ ಮೂಲತಃ ಕಾಂಗ್ರೆಸ್ ನಾಯಕರು, ಅವರನ್ನು ಈ ಚುನಾವಣೆಯಲ್ಲಿ ನಮ್ಮ ಪಕ್ಷ ಬೆಂಬಲಿಸಿದೆ. ಈಗ ಸರ್ಕಾರ ರಚನೆಯಲ್ಲಿ ಅವರ ಪಾತ್ರ ಅತಿಮುಖ್ಯವಾಗಿರುವು ದರಿಂದ ತಮ್ಮೊಂದಿಗೆ ಕರೆದುಕೊಂಡು ಹೋಗಲಾಗುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

Follow Us:
Download App:
  • android
  • ios