ರಾಜ್ಯಪಾಲರ ನಿರ್ಧಾರದ ಹಿಂದೆ ಮೋದಿ - ಶಾ
ಬಹುಮತವಿಲ್ಲದ ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನಿಸಿದ ರಾಜ್ಯಪಾಲರ ನಡೆಯ ಹಿಂದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಇದ್ದಾರೆ ಎಂದು ವಿಚಾರವಾದಿ ಪ್ರೊ. ಕೆ.ಎಸ್. ಭಗವಾನ್ ಆರೋಪಿಸಿದರು.
ಮೈಸೂರು: ಬಹುಮತವಿಲ್ಲದ ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನಿಸಿದ ರಾಜ್ಯಪಾಲರ ನಡೆಯ ಹಿಂದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಇದ್ದಾರೆ ಎಂದು ವಿಚಾರವಾದಿ ಪ್ರೊ. ಕೆ.ಎಸ್. ಭಗವಾನ್ ಆರೋಪಿಸಿದರು.
ಸಂವಿಧಾನ ಕಾಪಾಡುತ್ತೇವೆ, ರಕ್ಷಣೆ ಮಾಡುತ್ತೇವೆ ಎನ್ನುವ ಪಕ್ಷಗಳು, ಇಂದು ಸಂಪೂ ರ್ಣವಾಗಿ ಅದಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿವೆ.
ರಾಜ್ಯ ಪಾಲರು ಮತ್ತು ಪ್ರಧಾನಿಯು ಸಂವಿಧಾನ ಬದ್ಧರಾಗಿ ನಡೆದುಕೊಂಡಿದ್ದರೆ ಕರ್ನಾಟಕದಲ್ಲಿ ಇಂತಹ ಪರಿಸ್ಥಿತಿ ಉಂಟಾಗುತ್ತಿರಲಿಲ್ಲ ಎಂದರು