ಆರ್.ಆರ್.ನಗರದಲ್ಲಿ ಪತ್ತೆಯಾದ ಅಕ್ರಮ ಮತಚೀಟಿ ಪ್ರಕರಣದ ಬಗ್ಗೆ ರಾಜಕೀಯ ಪಕ್ಷಗಳು ಇನ್ನೂ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿರುವ ನಡುವೆ, ರಾಜಾಜಿನಗರದಲ್ಲಿ ಹಣ ಹಂಚಿಕೆ ಆರೋಪ ಕೇಳಿಬಂದಿದೆ. ಮನೆಯೊಂದರಿಂದ ಪೊಲೀಸರು ಮೂಟೆ ಹಣವನ್ನು ವಶಪಡಿಸಿಕೊಂಡಿದ್ದಾರೆ.  

ಬೆಂಗಳೂರು [ಮೆ.09]: ಆರ್. ಆರ್.ನಗರದ ಅಕ್ರಮ ಮತ ಚೀಟಿ ಪತ್ತೆಯಾದ ಬಳಿಕ ರಾಜಕೀಯ ಪಕ್ಷಗಳು ಆರೋಪ-ಪ್ರತ್ಯಾರೋಗಳಲ್ಲಿ ತೊಡಗಿರುವ ನಡುವೆಯೇ, ಬೆಂಗಳೂರಿನ ರಾಜಾಜಿನಗರದ ಕ್ಷೇತ್ರದ ಮನೆಯೊದರಿಂದ, ಮತದಾರರಿಗೆ ಹಂಚಲು ಇಡಲಾಗಿತ್ತೆನ್ನಲಾದ ಭಾರೀ ಪ್ರಮಾಣದ ಹಣವನ್ನು ಪೊಲೀಸರು ಬುಧವಾರ ವಶಪಡಿಸಿಕೊಂಡಿದ್ದಾರೆ.

Add Asianetnews Kannada as a Preferred SourcegooglePreferred

ಇಲ್ಲಿನ ಇಎಸ್‌ಐ ಆಸ್ಪತ್ರೆ ಬಳಿ ಮನೆಯೊಂದರಲ್ಲಿ ಮೂಟೆಯಲ್ಲಿ 500 ಮುಖಬೆಲೆಯ ಸುಮಾರು 93 ಸಾವಿರ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಕಾಂಗ್ರೆಸ್ ಕಾರ್ಯಕರ್ತರು ಮನೆಯೊಳಗಿದ್ದ ನೋಟುಗಳ ಕಂತೆಗಳನ್ನು ಪ್ರದರ್ಶಿಸಿದ್ದಾರೆ. 

ಬಳಿಕ ಮಾಜಿ ಉಪ-ಮೇಯರ್ ಹರೀಶ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅವರ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸರು ಹಣ ಜಪ್ತಿ ಮಾಡಿದ್ದು, ಯಾರಿಗೆ ಸೇರಿದ್ದು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

(ಸಾಂದರ್ಭಿಕ ಚಿತ್ರ)