ಉಮಾಶ್ರೀ, ಗೀತಾ ಮಹದೇವಪ್ರಸಾದ್ ಸೋಲು : ಜಯಚಂದ್ರಗೆ ತೀವ್ರ ಹಿನ್ನಡೆ
ತುಮಕೂರಿನ ಶಿರಾ ಕ್ಷೇತ್ರದಲ್ಲಿ ಸಚಿವ ಟಿ.ಬಿ. ಜಯಚಂದ್ರ ತೀವ್ರ ಹಿನ್ನಡೆಯಲ್ಲಿದ್ದು ಸೋಲುವ ಸಾಧ್ಯತೆ ಹೆಚ್ಚಾಗಿದೆ. ಈ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಮಾಜಿ ಶಾಸಕ ಬಿ.ಸತ್ಯನಾರಾಯಣ ಸತತ ಮುನ್ನಡೆ ಕಾಯ್ದುಕೊಂಡಿದ್ದಾರೆ. ಸಚಿವರಾದ ಬಸವರಾಜ ರಾಯರೆಡ್ಡಿ, ವಿನಯ್ ಕುಲಕರ್ಣಿ, ಆಂಜನೇಯ, ಡಾ.ಹೆಚ್.ಸಿ.ಮಹದೇವಪ್ಪ ಸೋಲುಂಡಿದ್ದಾರೆ.
ಹಾಲಿ ಸಚಿವೆಯರಾದ ಉಮಾಶ್ರೀ ಹಾಗೂ ಗೀತಾ ಮಹದೇವಪ್ರಸಾದ್ ಹೀನಾಯ ಸೋಲು ಅನುಭವಿಸಿದ್ದಾರೆ. ಬಾಗಲಕೋಟೆ ಕ್ಷೇತ್ರದ ತೆರದಾಳ, ಚಾಮರಾಜ ಜಿಲ್ಲೆಯ ಗುಂಡ್ಲುಪೇಟೆ ಕ್ಷೇತ್ರಗಳಲ್ಲಿ ಸೋಲನ್ನು ಅನುಭವಿಸಿದ್ದಾರೆ.
ತುಮಕೂರಿನ ಶಿರಾ ಕ್ಷೇತ್ರದಲ್ಲಿ ಸಚಿವ ಟಿ.ಬಿ. ಜಯಚಂದ್ರ ತೀವ್ರ ಹಿನ್ನಡೆಯಲ್ಲಿದ್ದು ಸೋಲುವ ಸಾಧ್ಯತೆ ಹೆಚ್ಚಾಗಿದೆ. ಈ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಮಾಜಿ ಶಾಸಕ ಬಿ.ಸತ್ಯನಾರಾಯಣ ಸತತ ಮುನ್ನಡೆ ಕಾಯ್ದುಕೊಂಡಿದ್ದಾರೆ. ಸಚಿವರಾದ ಬಸವರಾಜ ರಾಯರೆಡ್ಡಿ, ವಿನಯ್ ಕುಲಕರ್ಣಿ, ಆಂಜನೇಯ, ಡಾ.ಹೆಚ್.ಸಿ.ಮಹದೇವಪ್ಪ ಸೋಲುಂಡಿದ್ದಾರೆ.
ಚುನಾವಣಾ ಸುದ್ದಿಗಳಿಗಾಗಿ http://elections.suvarnanews.com/
ಲೈವ್ ಅಪ್'ಡೇಟ್'ಗಳಿಗಾಗಿ : ವಿಧಾನಸಭಾ ಚುನಾವಣೆ ಫಲಿತಾಂಶ: ಡಿಕೆಶಿ, ಕುಮಾರಸ್ವಾಮಿಗೆ ಗೆಲುವು