Asianet Suvarna News Asianet Suvarna News

ಈಶಾನ್ಯ ಪದವೀಧರ ಕ್ಷೇತ್ರದಿಂದ ವಾಟಾಳ್ ನಾಮಪತ್ರ ಸಲ್ಲಿಕೆ

ಈಶಾನ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಮಂಗಳವಾರ ನಾಮಪತ್ರ ಸಲ್ಲಿಸಿದರು. 
 

Vatal Nagaraj files nomination papers for the elections to North East Graduate Constituency

ಕಲಬುರಗಿ: ಈಶಾನ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಮಂಗಳವಾರ ನಾಮಪತ್ರ ಸಲ್ಲಿಸಿದರು. 

ನಾಮಪತ್ರ ಸಲ್ಲಿಕೆಗೆ ಮಂಗಳವಾರ (ಮೇ 22) ಕೊನೆ ದಿನವಾಗಿದ್ದು, ವಾಟಾಳ್ ಸೇರಿದಂತೆ ಇದುವರೆಗೂ ಒಟ್ಟು 7 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕ್ಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಂತಹ ಎಲ್ಲಾ ಪಕ್ಷಗಳು ಹೈ.ಕ. ಪ್ರದೇಶವನ್ನು ಕಡೆಗಣಿಸಿವೆ. 

ಹಾಗಾಗಿ ಈ ಭಾಗದ ಸಮಸ್ಯೆಯನ್ನು ವಿಧಾನಸೌಧ ಮತ್ತು ವಿಧಾನ ಪರಿಷತ್ತಿನಲ್ಲಿ ಚರ್ಚಿಸುವುದಕ್ಕಾಗಿಯೇ ನಾನು ನಾಮಪತ್ರ ಸಲ್ಲಿಸುತ್ತಿದ್ದೇನೆ. ಆಂಧ್ರಪ್ರದೇಶ, ತೆಲಂಗಾಣ ಹಾಗೂ ಮಹಾರಾಷ್ಟ್ರಕ್ಕೆ ಹೋಲಿಸಿದರೆ ಹೈದ್ರಾಬಾದ್ ಕರ್ನಾಟಕದಲ್ಲಿ ಹೋರಾಟದ ಮನೋಭಾವ ಕಡಿಮೆಯಿದೆ. ಆಡಳಿತ ಪಕ್ಷಗಳು ಈ ಭಾಗವನ್ನು ಕಡೆಗಣಿಸಿವೆ ಎಂದು ದೂರಿದರು.

Follow Us:
Download App:
  • android
  • ios