Asianet Suvarna News Asianet Suvarna News

ವಿಜಯೇಂದ್ರಗೆ ಟಿಕೆಟ್ ಕೈತಪ್ಪಿದ್ದು ಯಾಕೆ..? ಮೋದಿ ಸ್ಪಷ್ಟ ಸಂದೇಶ

ಪ್ರಧಾನಿ ಮೋದಿ ಅವರು ಮುಖ್ಯಮಂತ್ರಿ ತವರು ಜಿಲ್ಲೆಯ ಪಕ್ಕದಲ್ಲೇ ನಿಂತು ಕಾಂಗ್ರೆಸ್‌ನ ಕುಟುಂಬ ರಾಜಕಾರಣವನ್ನು ಮಂಗಳವಾರ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಮೂಲಕ ಮೈಸೂರು ಜಿಲ್ಲೆಯ ವರುಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರರಿಗೆ ಟಿಕೆಟ್ ಕೈತಪ್ಪಿದ್ದು ಯಾಕೆ ಎನ್ನುವ ಸಂದೇಶವನ್ನು ಕ್ಷೇತ್ರದ ಕಾರ್ಯಕರ್ತರಿಗೆ ರವಾನಿಸಿದ್ದಾರೆ. 

Vijayendra denied ticket for Varuna Constituency

ಚಾಮರಾಜನಗರ: ಪ್ರಧಾನಿ ಮೋದಿ ಅವರು ಮುಖ್ಯಮಂತ್ರಿ ತವರು ಜಿಲ್ಲೆಯ ಪಕ್ಕದಲ್ಲೇ ನಿಂತು ಕಾಂಗ್ರೆಸ್‌ನ ಕುಟುಂಬ ರಾಜಕಾರಣವನ್ನು ಮಂಗಳವಾರ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಮೂಲಕ ಮೈಸೂರು ಜಿಲ್ಲೆಯ ವರುಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರರಿಗೆ ಟಿಕೆಟ್ ಕೈತಪ್ಪಿದ್ದು ಯಾಕೆ ಎನ್ನುವ ಸಂದೇಶವನ್ನು ಕ್ಷೇತ್ರದ ಕಾರ್ಯಕರ್ತರಿಗೆ ರವಾನಿಸಿದ್ದಾರೆ. 


ಚಾಮರಾಜನಗರ ಜಿಲ್ಲೆಯ ಸಂತೆಮರಹಳ್ಳಿಯಲ್ಲಿ ಆಯೋಜಿಸಿದ್ದ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಮೋದಿ, ಸಿದ್ದರಾಮಯ್ಯ ಅವರು ರಾಜ್ಯದಲ್ಲಿ 2+1 ಎಂಬ ಹೊಸ ರಾಜಕೀಯ ಸೂತ್ರವನ್ನು ಪರಿಚಯಿಸಿದ್ದಾರೆ. ಸೋಲುವ ಭೀತಿಯಿಂದ ಇನ್ನೊಂದು ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಅವರು, ತಾವು ಈ ಹಿಂದೆ ಪ್ರತಿನಿಧಿಸುತ್ತಿದ್ದ ಕ್ಷೇತ್ರವನ್ನು ತಮ್ಮ ಪುತ್ರನಿಗೆ ಬಿಟ್ಟುಕೊಟ್ಟಿದ್ದಾರೆ. ಮೂರರಲ್ಲಿ ಒಂದು ಗೆದ್ದರೂ ಸಾಕು, ಕುಟುಂಬ ರಾಜಕಾರಣದ ಚಕ್ರ ನಡೆಯುತ್ತದೆ ಎಂಬ ಭಾವನೆ ಅವರದು ಎಂದು ಮೋದಿ ವ್ಯಂಗ್ಯವಾಡಿದ್ದಾರೆ.

ಜತೆಗೆ, ತಮ್ಮ ಮಕ್ಕಳಿಗೆ ಟಿಕೆಟ್ ಕೊಡಿಸಿರುವ ರಾಜ್ಯದ ಸಚಿವರದು 1+1 ಎಂಬ ಸೂತ್ರ ಎಂದು ಮೋದಿ ವ್ಯಂಗ್ಯವಾಡಿದ್ದಾರೆ. ಈ ಸೂತ್ರದಿಂದಾಗಿ ಕಾಂಗ್ರೆಸ್ ಕಾರ್ಯಕರ್ತರಿಗೆ ಎಷ್ಟು ನೋವಾಗಿದೆ ಎನ್ನುವುದು ನನಗೆ ಅರ್ಥವಾಗುತ್ತದೆ ಎಂದು ಕಾಲೆಳೆದಿದ್ದಾರೆ. ವರುಣದಲ್ಲಿ ವಿಜಯೇಂದ್ರಗೆ ಕೊನೇ ಕ್ಷಣ ಟಿಕೆಟ್ ಕೈತಪ್ಪಿತ್ತು.

Follow Us:
Download App:
  • android
  • ios