ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್ ಯಡಿಯೂರಪ್ಪ ರಾಜೀನಾಮೆ ನೀಡುವುದು ಬಹುತೇಕ ಖಚಿತವಾದಂತಾಗಿದೆ.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್ ಯಡಿಯೂರಪ್ಪ ರಾಜೀನಾಮೆ ನೀಡುವುದು ಬಹುತೇಕ ಖಚಿತವಾದಂತಾಗಿದೆ. ಬಹುಮತ ಸಾಬೀತಿಗಿಂತ ರಾಜೀನಾಮೆ ಸೂಕ್ತ ಎಂಬ ನಿರ್ಧಾರ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಲು ಯಡಿಯೂರಪ್ಪ ತೀರ್ಮಾನ ಮಾಡಿದ್ದಾರೆ ಎನ್ನಲಾಗಿದೆ.
ಬಹುಮತ ಸಾಬೀತಿಗೆ ಕೆಲ ಕ್ಷಣಗಳು ಬಾಕಿ ಇರುವ ಈ ಸಂದರ್ಭದಲ್ಲಿ ಯಡಿಯೂರಪ್ಪ ಈ ನಿರ್ಧಾರ ಮಾಡಿದ್ದಾರೆ.
ಕಳೆದ ಬಾರಿ ಒಂದು ವಾರಗಳ ಕಾಲ ಸಿಎಂ ಆಗಿ ಆಡಳಿತ ನಡೆಸಿದ್ದ ಯಡಿಯೂರಪ್ಪ ಇದೀಗ ಮೂರು ದಿನಗಳಿಗೆ ರಾಜೀನಾಮೆ ನೀಡಲಿದ್ದಾರೆ.
ಯಡಿಯೂರಪ್ಪ ಅವರಿಂದ ಮುಖ್ಯಮಂತ್ರಿ ಸ್ಥಾನ ತೆರವಾದಲ್ಲಿ ಎಚ್.ಡಿ ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ.
