ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ  ದೇವಾಲಯ ಒಂದರಲ್ಲಿ  ಸುಮಾರು 10 ಲಕ್ಷ ಮೌಲ್ಯದ ಚಿನ್ನಾಭರಣ ಕಳವಾಗಿದೆ. 

ಕಾರವಾರ (ಆ.16): ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವಾಲದಲ್ಲಿ ಕಳ್ಳತನ ನಡೆದಿದ್ದು,ಅಪಾರ ಪ್ರಮಾಣದ ಚಿನ್ನಾಭರಣ ಕಳವಾಗಿದೆ.

Add Asianetnews Kannada as a Preferred SourcegooglePreferred

ಕುಮಟಾ ತಾಲೂಕಿನ ವಿಷ್ಣುಮೂರ್ತಿ ದೇಗುಲದಲ್ಲಿ ಕಳ್ಳತನ ನಡೆದಿದ್ದು, ದೇವಾಲಯದ ಬಾಗಿಲು ಮುರಿದು ಕಳವು ಮಾಡಲಾಗಿದೆ.

ದೇವರ ಕವಚ ಸೇರಿ ಸುಮಾರು 10 ಲಕ್ಷ ರು. ಮೌಲ್ಯದ ಚಿನ್ನಾಭರಣ ಕಳವು ಮಾಡಿ ಕಳ್ಳರು ಪರಾರಿಯಾಗಿದ್ದಾರೆ.

ರಾಜ್ಯದಲ್ಲಿ ಮತ್ತೆ 5 ದಿನ ಭಾರೀಮಳೆ : ಎಲ್ಲೆಲ್ಲಿ ಅಲರ್ಟ್..?...

ಕಳ್ಳತನದ ಬಗ್ಗೆ ಅನುಮಾನಗೊಂಡು ಅರ್ಚಕರು ಸ್ಥಳಕ್ಕೆ ಆಗಮಿಸುವ ವೇಳೆಗಾಗಲೇ ಕಳ್ಳರು ಸ್ಥಳದಿಂದ ಕಾಲ್ಕಿತ್ತಿದ್ದು, ಸ್ಥಳಕ್ಕೆ ಕುಮಟಾಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸ್ಥಳಕ್ಕೆ ಶ್ವಾನ ದಳ ಹಾಗೂ ಬೆರಳಚ್ಚುತಜ್ಞರು ಭೇಟಿ ನೀಡಿದ್ದು,ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.