ಕರ್ನಾಟಕದಲ್ಲಿ ಮುಂದುವರಿದ ಕೊರೋನಾ ಆರ್ಭಟ/ ಬರೋಬ್ಬರಿ ಹತ್ತು ಸಾವಿರ ಪ್ರಕರಣ ದಾಖಲು/ ನಿಯಂತ್ರಣಕ್ಕೆ ಬರದ ಮಹಾಮಾರಿ/ ಅನ್  ಲಾಕ್ ಕೊನೆ ಹಂತಕ್ಕೆ ಸಿದ್ಧತೆ

ಬೆಂಗಳೂರು (ಅ. 04) ಅನ್ ಲಾಕ್ ಕೊನೆಯ ಹಂತಕ್ಕೆ ಕೆಲ ದಿನ ಮಾತ್ರ ಬಾಕಿ ಉಳಿದಿದೆ. ಆದರೆ ಕರ್ನಾಟಕದಲ್ಲಿ ಕೊರೋನಾ ಮಾತ್ರ ಕಂಟ್ರೋಲ್ ಗೆ ಸಿಗುವ ಯಾವ ಲಕ್ಷಣಗಳು ಕಾಣುತ್ತಿಲ್ಲ. ಭಾನುವಾರ ಮತ್ತೆ ದಾಖಲೆಯ 10,145 ಮಂದಿಗೆ ಕೊರೋನಾ ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 6,40,661 ತಲುಪಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ 67 ಮಂದಿ ಸಾವು ಕಂಡಿದ್ದಾರೆ. ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 9,286ಕ್ಕೆ ಏರಿಕೆಯಾಗಿದೆ.

ನಂದಿ ಬೆಟ್ಟಕ್ಕೆ ಹೋಗುವವರು ಎಲ್ಲ ಮರೆತರು

ಬೆಂಗಳೂರು ನಗರದಲ್ಲಿ 4,340 ಹೊಸ ಪ್ರಕರಣಗಳು ದಾಖಲಾಗಿದ್ದು ಭಾನುವಾರದ ಲೆಕ್ಕ. ಬೆಂಗಳೂರಿನ ಸೋಂಕಿತರ ಸಂಖ್ಯೆ 2,50,040ಕ್ಕೆ ಏರಿಕೆಯಾಗಿದೆ.

ಇಂದು 7,287 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 5,15,782ಕ್ಕೆ ಏರಿಕೆಯಾಗಿದೆ. 1,15,574 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅನ್ ಲಾಕ್ ಕೊನೆಯ ಹಂತ ಅಕ್ಟೋಬರ್ 15 ಕ್ಕೆ ತೆರೆದುಕೊಳ್ಳಲಿದ್ದು ಸಿನಿಮಾ ಮಂದಿರಗಳು, ಈಜುಕೋಳ ಮತ್ತು ಕ್ರೀಡಾ ತರಬೇತಿ ಶಿಬಿರಗಳು ಆರಂಭವಾಗಲಿದೆ ಎಂದು ಈ ಹಿಂದೆಯೇ ಕೇಂದ್ರ ಸರ್ಕಾರ ತಿಳಿಸಿದೆ. 

Scroll to load tweet…