70 ಪತ್ರಕರ್ತರರು ಕೋವಿಡ್‌ ಪರೀಕ್ಷೆ (ಆರ್‌ಟಿ​ಪಿಸಿಆರ್‌) ಮಾಡಿಸಿಕೊಂಡಿದ್ದು, ಅದರಲ್ಲಿ ಹನ್ನೆರಡು ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಹೋಮ್‌ ಐಸೋಲೇಶನ್‌ ಇದ್ದರೆ ಸಾಕು. ಆರೋಗ್ಯ ಇಲಾಖೆಯ ಅಧಿಕಾರಿಗಳು ಇವರನ್ನು ಸಂಪರ್ಕಿಸಿ ಔಷಧೋಪಚಾರ ಮಾಡಲಿದ್ದಾರೆ. 

ಬೆಳಗಾವಿ (ಮೇ.02): ಮೇ 2ರಂದು ಬೆಳಗಾವಿ ಲೋಕಸಭಾ ಉಪಚುನಾವಣೆಯ ಮತ ಎಣಿಕೆ ಹಿನ್ನೆಲೆಯಲ್ಲಿ ಬೆಳಗಾವಿಯ ಸುಮಾರು 70 ಪತ್ರಕರ್ತರರು ಕೋವಿಡ್‌ ಪರೀಕ್ಷೆ (ಆರ್‌ಟಿ​ಪಿಸಿಆರ್‌) ಮಾಡಿಸಿಕೊಂಡಿದ್ದು, ಅದರಲ್ಲಿ ಹನ್ನೆರಡು ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ.

Add Asianetnews Kannada as a Preferred SourcegooglePreferred

 ಇದರಲ್ಲಿ ಹನ್ನೊಂದು ಜನರಿಗೆ ಯಾವುದೇ ಲಕ್ಷಣಗಳಿಲ್ಲ(ಅಸಿಂಪ್ಟಮೆಟಿಕ್‌). ಆದಾಗ್ಯೂ ಸರ್ಕಾರದ ಮಾರ್ಗಸೂಚಿ ಪ್ರಕಾರ ಅವರು ಹೋಮ್‌ ಐಸೋಲೇಶನ್‌ ಇದ್ದರೆ ಸಾಕು. ಆರೋಗ್ಯ ಇಲಾಖೆಯ ಅಧಿಕಾರಿಗಳು ಇವರನ್ನು ಸಂಪರ್ಕಿಸಿ ಔಷಧೋಪಚಾರ ಮಾಡಲಿದ್ದಾರೆ. 

ರಾಜ್ಯದಲ್ಲಿ ಲಾಕ್ಡೌನ್‌ ಇಲ್ಲ, ಜನತಾ ಕರ್ಫ್ಯೂ ವಿಸ್ತರಣೆ ಸಾಧ್ಯತೆ: ಸುಧಾಕರ್‌! ..

ಈ ವಿಷಯವನ್ನು ಈಗಾಗಲೇ ಜಿಲ್ಲಾಧಿಕಾರಿ ಗಮನಕ್ಕೆ ತರಲಾಗಿದೆ. ಚಿಕಿತ್ಸೆಗೆ ಸಂಬಂಧಿಸಿದಂತೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. 

ಮನೆಯಲ್ಲಿ ಪ್ರತ್ಯೇಕವಾಗಿ ಇರಲು ಸಾಧ್ಯವಿಲ್ಲದವರಿಗೆ ಖಾಸಗಿ ಹೋಟೆಲ್‌ನಲ್ಲಿ ಐಸೋಲೇಶನ್‌ಗೆ ವ್ಯವಸ್ಥೆ ಕಲ್ಪಿಸಲು ಟಿವಿಯ ವರದಿಗಾರೊಬ್ಬರು ಮುಂದಾಗಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona