ಉಡುಪಿಯಲ್ಲಿ 14 ಜನ ಕೊರೋನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೊರೋನಾ ಸೋಲಿಸಿದ ಜನರಿಗೆ ವೈದ್ಯರು ಹೂಗಿಡ ಹಾಗೂ ಚಾಕಲೇಟ್ ಕೊಟ್ಟು ಬೀಳ್ಕೊಟ್ಟಿದ್ದಾರೆ.

ಉಡುಪಿ(ಮೇ 31): ಉಡುಪಿಯಲ್ಲಿ 14 ಜನ ಕೊರೋನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೊರೋನಾ ಸೋಲಿಸಿದ ಜನರಿಗೆ ವೈದ್ಯರು ಹೂಗಿಡ ಹಾಗೂ ಚಾಕಲೇಟ್ ಕೊಟ್ಟು ಬೀಳ್ಕೊಟ್ಟಿದ್ದಾರೆ.

Add Asianetnews Kannada as a Preferred SourcegooglePreferred

ಗುಣಮುಖರಾದ ಮತ್ತಷ್ಟು ಜನ ಡಿಸ್ಚಾರ್ಜ್ ಆಗಿದ್ದು, ಉಡುಪಿಯ 14 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಕುಂದಾಪುರ ಸರಕಾರಿ ಆಸ್ಪತ್ರೆಯಿಂದ14 ಜನ ಡಿಸ್ಚಾರ್ಜ್‌ ಆಗಿದ್ದಾರೆ.

ಕುಮಟಾದ ಒಂದೇ ಕುಟುಂಬದ ನಾಲ್ವರಲ್ಲಿ ಸೋಂಕು ದೃಢ?

ರೋಗ ಸೋಲಿಸಿದವರಿಗೆ ಹೂವಿನ ಗಿಡಗಳನ್ನು ಕೊಟ್ಟು ವೈದ್ಯರು ಬೀಳ್ಕೊಟ್ಟಿದ್ದಾರೆ. ಡಿಎಚ್‌ಒ ಮಕ್ಕಳಿಗೆ ಚಾಕ್ಲೇಟ್ ಕೊಟ್ಟು ಡಿಸ್ಚಾರ್ಜ್ ಮಾಡಿದ್ದಾರೆ. ಎಸಿ, ಪೊಲೀಸರು ವೈದ್ಯಾಧಿಕಾರಿಗಳು ಬಿಡುಗಡೆ ಸಂದರ್ಭ ಭಾಗಿಯಾಗಿದ್ದರು.

ಉಡುಪಿ ಜಿಲ್ಲೆಯಿಂದ ಈವರೆಗೆ ಒಟ್ಟು 64 ಸೋಂಕಿತರು ಗುಣಮುಖರಾಗಿ`ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಸಕ್ರಿಯ ಕೊರೋನಾ ಕೇಸುಗಳ ಸಂಖ್ಯೆ 112 ಕ್ಕೆ ಇಳಿಕೆಯಾಗಿದೆ.