ಗುಡುಗು ಮಿಂಚಿನ ಮಳೆ| ಸಿಡಿಲು ಬಡಿದು ವ್ಯಕ್ತಿ ಜೊತೆಗೆ 16 ಕುರಿಗಳು ಸಾವು| ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಆನಂದಗಲ್ ಗ್ರಾಮದಲ್ಲಿ ನಡೆದ ಘಟನೆ| ಈ ಸಂಬಂಧ ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು|
ಕವಿತಾಳ(ಏ.15): ಮಸ್ಕಿ ತಾಲೂಕಿನ ಆನಂದಗಲ್ ಗ್ರಾಮದ ಹತ್ತಿರ ಸಿಡಿಲು ಬಡಿದು ವ್ಯಕ್ತಿ ಸೇರಿ 16 ಕುರಿಗಳು ಸಾವನಪ್ಪಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಮೃತ ವ್ಯಕ್ತಿ ಲಿಂಗಸುಗೂರು ತಾಲೂಕಿನ ಮೇದಿನಾಪುರ ಗ್ರಾಮದ ಈರಪ್ಪ (32) ಎಂದು ಗುರುತಿಸಲಾಗಿದೆ.
Add Asianetnews Kannada as a Preferred Source

ಸಂಜೆ ದಟ್ಟವಾಗಿ ಕವಿದ ಮೋಡದ ವಾತಾವರಣದಲ್ಲಿ ಗುಡುಗು ಮಿಂಚಿನ ಮಳೆಯಾಗಿದೆ. ಇದೇ ವೇಳೆ ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮರದ ಕೆಳಗೆ ಆಶ್ರಯ ಪಡೆದಿದ್ದಾರೆ.
4 ದಿನ ಭಾರೀ ಮಳೆ: ಹಲವು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್
ಈ ವೇಳೆ ಸಿಡಿಲು ಬಡಿದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಇದರ ಜೊತೆಗೆ 16 ಕುರಿಗಳು ಸಾವನಪ್ಪಿವೆ. ಘಟನೆಗೆ ಸಂಬಂಧಿಸಿದಂತೆ ಕವಿತಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
