ಚಾಮರಾಜನಗರ ಜಿಲ್ಲೆ ಮಲೈಮಹದೇಶ್ವರ ಬೆಟ್ಟದಲ್ಲಿ 5.18 ಕೋಟಿ ರೂ ಬಾಡಿಗೆ ಬಾಕಿ  ಉಳಿಸಿಕೊಂಡಿದ್ದ 18 ಅಂಗಡಿ ಮಳಿಗೆಗಳಿಗೆ ಬೀಗಮುದ್ರೆ ಹಾಕಲಾಗಿದೆ.  

ಚಾಮರಾಜನಗರ (ಮಾ.29): ಚಾಮರಾಜನಗರ ಜಿಲ್ಲೆ ಮಲೈಮಹದೇಶ್ವರ ಬೆಟ್ಟದಲ್ಲಿ 5.18 ಕೋಟಿ ರೂ ಬಾಡಿಗೆ ಬಾಕಿ ಉಳಿಸಿಕೊಂಡಿದ್ದ 18 ಅಂಗಡಿ ಮಳಿಗೆಗಳಿಗೆ ಬೀಗಮುದ್ರೆ ಹಾಕಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಂಗಡಿ ಮಳಿಗೆಗಳನ್ನು ಬಾಡಿಗೆಗೆ ಟೆಂಡರ್ ಪಡೆದಿದ್ದ ವ್ಯಾಪಾರಿಗಳು ಅವಧಿ ಮುಗಿದರು ಖಾಲಿ ಮಾಡದೆ ಮುಂದುವರಿದಿದ್ದರು. ಇದಲ್ಲದೆ ಕೊರೋನಾ ಹಿನ್ನಲೆಯಲ್ಲಿ ಮಲೈಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ 20 ತಿಂಗಳ ಬಾಡಿಗೆಯನ್ನೂ ಮನ್ನಾ ಮಾಡಿತ್ತು. 

ಚಾಮರಾಜನಗರ: ಮಲೆ ಮಹದೇಶ್ವರ ದೇವಸ್ಥಾನದ ಹುಂಡಿಯಲ್ಲಿ 1.5 ಕೋಟಿ ಸಂಗ್ರಹ ...

ಆದರೂ ಸಹ 5.18 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದ್ದರು. ಈ ಹಿನ್ನಲೆಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ 18 ಅಂಗಡಿಗಳಿಗೆ ಬೀಗಮುದ್ರೆ ಹಾಕಲಾಗಿದೆ.