ಹಾಸನದಲ್ಲಿ 18 ವರ್ಷ ವಯಸ್ಸಿನ ಕಾಡಾನೆ ಮೃತಪಟ್ಟಿದೆ. ಮೂರು ತಿಂಗಳಲ್ಲಿ ಮೂರು ಆನೆಗಳು ಸಾವನ್ನಪ್ಪಿವೆ.
ಸಕಲೇಶಪುರ (ಮಾ.15): ತಾಲೂಕಿನ ಸುಂಡೆಕೆರೆ ವ್ಯಾಪ್ತಿಯಲ್ಲಿ 18 ವರ್ಷದ ಗಂಡಾನೆ ಸಾವನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕಳೆದ ಮೂರು ತಿಂಗಳಲ್ಲಿ ಮೂರು ಆನೆ ಸಾವನ್ನಪ್ಪಿದ್ದಕ್ಕೆ ಸ್ಥಳೀಯರಿಂದ ಭಾರಿ ಆಕ್ರೋಶ ವ್ಯಕ್ತವಾಗಿದೆ. ಆನೆ ಸಾವನ್ನಪ್ಪಿ 4-5 ದಿನ ಕಳೆದಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದು, ಎಸಿಎಫ್ ಲಿಂಗರಾಜು ನೇತೃತ್ವದಲ್ಲಿ ಆನೆಯ ಶವ ಪರೀಕ್ಷೆ ನಡೆಸಲಾಗಿದೆ.
ಸಕಲೇಶಪುರ ತಾಲೂಕಿನಲ್ಲಿ ಆನೆಗಳ ಸಾವು ಹೆಚ್ಚಾಗುತ್ತಿದೆ. ಅನೆ ಮೃತಪಟ್ಟಿರುವ ಸ್ಥಳಕ್ಕೆ ಸ್ಥಳೀಯರನ್ನು ಬಿಡದ್ದರಿಂದ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
