ರಕ್ಷಿಸಲ್ಪಟ್ಟವರಲ್ಲಿ 18 ಮಂದಿ ಭಾರತೀಯರು ಮತ್ತು ಓರ್ವ ಇಥಿಯೋಪಿಯನ್ ಪ್ರಜೆ ಸೇರಿದ್ದಾನೆ
ಮಂಗಳೂರು(ಸೆ.17): ಯುಎಇಯಿಂದ ಮಂಗಳೂರಿಗೆ ಸರಕು ಸಾಗಿಸುತ್ತಿದ್ದ ಗಬಾನ್ ದೇಶದ ಹಡಗು ರತ್ನಗಿರಿ ಕರಾವಳಿಯ ಪಶ್ಚಿಮಕ್ಕೆ ಸುಮಾರು 41 ಮೈಲ್ ದೂರದಲ್ಲಿ ಅಪಾಯದಲ್ಲಿ ಸಿಲುಕಿದ್ದು ಅದರಲ್ಲಿದ್ದ 19 ಮಂದಿಯನ್ನು ಭಾರತೀಯ ಕೋಸ್ಟ್ ಗಾರ್ಡ್ ರಕ್ಷಿಸಿದೆ.
Add Asianetnews Kannada as a Preferred Source

ರಕ್ಷಿಸಲ್ಪಟ್ಟವರಲ್ಲಿ 18 ಮಂದಿ ಭಾರತೀಯರು ಮತ್ತು ಓರ್ವ ಇಥಿಯೋಪಿಯನ್ ಪ್ರಜೆ ಸೇರಿದ್ದಾನೆ. ಯುಎಇಯ ಖೋರ್ ಫಕನ್ನಿಂದ 3,911 ಮೆಟ್ರಿಕ್ ಟನ್ ಅಸಾಲ್ಟ್ ಬಿಟುಮಿನ್ ಹೊತ್ತು ಮಂಗಳೂರು ಕಡೆಗೆ ಬರುತ್ತಿದ್ದ ಹಡಗು ಬೆಳಗ್ಗೆ 9.23ರ ವೇಳೆಗೆ ಅಪಾಯಕ್ಕೆ ಸಿಲುಕಿತ್ತು.
Mangaluru: ಉಳ್ಳಾಲ ಕಡಲಲ್ಲಿ ವಿದೇಶಿ ನೌಕೆ ಮುಳುಗಡೆ, ತೈಲ ಸೋರಿಕೆ ಭೀತಿ
ಈ ಬಗ್ಗೆ ಕರೆ ಸ್ವೀಕರಿಸಿದ ಮುಂಬೈ ಕೋಸ್ಟ್ ಗಾರ್ಡ್ ಕೂಡಲೇ ಸುಜೀತ್ ಮತ್ತು ಅಪೂರ್ವ ಎಂಬ ಎರಡು ಹಡಗುಗಳು ಹಾಗೂ ಹೆಲಿಕಾಪ್ಟರ್ ಮೂಲಕ ಕಾರ್ಯಾಚರಣೆ ನಡೆಸಿದೆ. ಹಡಗು ಮುಳುಗುವ ಹಂತದಲ್ಲಿದೆ ಎಂದು ಕೋಸ್ಟ್ ಗ್ಗಾರ್ಡ್ ಮೂಲಗಳು ತಿಳಿಸಿವೆ.
