Asianet Suvarna News Asianet Suvarna News

ಚಾಮರಾಜನಗರ : ವಿದ್ಯಾರ್ಥಿಗಳಿಗೆ ವಕ್ಕರಿಸಿದ ಕೊರೋನಾ

  • ಚಾಮರಾಜನಗರದಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಮಹಾಮಾರಿ ಕೊರೋನಾ ಸೋಂಕು
  • ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಆದರ್ಶ ಶಾಲೆಯ ವಿದ್ಯಾರ್ಥಿಗಳಿಬ್ಬರಲ್ಲಿ ಪಾಸಿಟಿವ್
2 students Covid report positive in yelandur snr
Author
Bengaluru, First Published Sep 19, 2021, 1:24 PM IST

ಚಾಮರಾಜನಗರ (ಸೆ.19): ಚಾಮರಾಜನಗರದಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಮಹಾಮಾರಿ ಕೊರೋನಾ ಸೋಂಕು ತಗುಲಿದೆ.

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಆದರ್ಶ ಶಾಲೆಯ ವಿದ್ಯಾರ್ಥಿಗಳಿಬ್ಬರಲ್ಲಿ ಪಾಸಿಟಿವ್ ಬಂದಿದೆ. ಕಳೆದ ಮೂರು ದಿನಗಳ ಹಿಂದೆ ಶಾಲೆಯ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ಮಾಡಿದ್ದು ಈ ವೇಳೆ ಸೋಂಕು ತಗುಲಿರುವುದು ಪತ್ತೆಯಾಗಿದೆ.

ಶಾಲೆಯ ಎಲ್ಲಾ‌ ವಿದ್ಯಾರ್ಥಿಗಳ ಗಂಟಲು ದ್ರವ ಸಂಗ್ರಹ ಮಾಡಿದ್ದು, ವರದಿಯಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ದೃಢಪಟ್ಟಿದೆ. ಮುನ್ನೆಚ್ವರಿಕೆ ಕ್ರಮವಾಗಿ ಕೆಲ ದಿನ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ.

ದೇಶದಲ್ಲಿ ಶೇ.70 ರಷ್ಟು ಕೋವಿಡ್ ಲಸಿಕೀಕರಣ ಕಂಪ್ಲೀಟ್ : ಜೋಷಿ

ಆದರ್ಶ ಶಾಲೆಯಲ್ಲಿ 6 ರಿಂದ 10ನೇ ತರಗತಿವರೆಗೆ ಪಾಳಿ ಪದ್ಧತಿಯಲ್ಲಿ ಪಾಠಗಳು ನಡೆಯುತ್ತಿದ್ದು, ಒಟ್ಟು‌ 398 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ.  ಶಾಲೆಯ ಆವರಣ ಮತ್ತು ಕೊಠಡಿಗಳಿಗೆ ಮುನ್ನಚ್ಚರಿಕೆ ಕ್ರಮವಾಗಿ ಸ್ಯಾನಿಟೈಸ್ ಮಾಡಲಾಗಿದೆ. ಶಾಲೆಯಲ್ಲಿ ಹೆಚ್ಚಿದ ಆತಂಕ ಹೆಚ್ಚಾಗಿದೆ. 

Follow Us:
Download App:
  • android
  • ios