ಮಹಾರಾಷ್ಟ್ರ ಮುಂಬೈ ಸೇರಿ ದೇಶದ ವಿವಿಧ ರಾಜ್ಯಗಳಿಂದ ಆಗಮಿಸಿದ ಜನರಿಗೆ ರಾಯಚೂರು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕ್ವಾರಂಟೈನ್| ಕ್ವಾರಂಟೈನ್ನಲ್ಲಿದ್ದ ಕೆಲವರು ತಪ್ಪು ಮೊಬೈಲ್ ಸಂಖ್ಯೆಗಳನ್ನು ನೀಡಿದ್ದರಿಂದ ಗೊಂದಲ ಸೃಷ್ಟಿ|
ರಾಯಚೂರು(ಜೂ.05): ಜಿಲ್ಲೆಯಲ್ಲಿ ಕ್ವಾರಂಟೈನ್ನಲ್ಲಿದ್ದ 206 ಜನರು ಪರಾರಿಯಾಗಿದ್ದಾರೆ ಎನ್ನುವ ಮಾಹಿತಿ ಗೊಂದಲ ಸೃಷ್ಟಿಸಿತ್ತು. ಆದರೆ ಇಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಎಸ್ಪಿ ವೇಧಮೂರ್ತಿ ಸ್ಪಷ್ಟಪಡಿಸಿದ್ದಾರೆ.
Add Asianetnews Kannada as a Preferred Source

ಮಹಾರಾಷ್ಟ್ರ ಮುಂಬೈ ಸೇರಿ ದೇಶದ ವಿವಿಧ ರಾಜ್ಯಗಳಿಂದ ಆಗಮಿಸಿದ ಜನರನ್ನು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಕ್ವಾರಂಟೈನ್ನಲ್ಲಿದ್ದ ಕೆಲವರು ತಪ್ಪು ಮೊಬೈಲ್ ಸಂಖ್ಯೆಗಳನ್ನು ನೀಡಿದ್ದರಿಂದ ಈ ಗೊಂದಲ ಸೃಷ್ಟಿಯಾಗಿತ್ತು. ಸದ್ಯ ತಿಳಿಯಾಗಿದೆ ಎನ್ನಲಾಗಿದೆ.
ಕೊರೋನಾ ಕಾಟ: ರಾಜ್ಯದಲ್ಲಿ ಮಹಾರಾಷ್ಟ್ರದಿಂದಲೇ 2561 ಸೋಂಕು!
ಬೆಂಗಳೂರಿನಿಂದ ನಡೆಸಿದ ಬಯೋ ಫೇನ್ಚಿಂಗ್ನಲ್ಲಿ ಈ ಮಾಹಿತಿ ಲಭ್ಯವಾಗಿತ್ತು. ಈ ಸುದ್ದಿ ಹರಡುತ್ತಿದ್ದಂತೆ ಆಡಳಿತ ವರ್ಗ ಹಾಗೂ ಜನಸಾಮಾನ್ಯರು ಆತಂಕಗೊಂಡಿದ್ದರು.
