ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಭೀಮನಕೋಣೆ ಗ್ರಾಮದಲ್ಲಿ ನಡೆದ ಘಟನೆ. ಸಾಗರದ ರಾಮನಗರದ ಯುವಕ ಯಶವಂತ್ ಎಂಬಾತನೇ ನೀರು ಪಾಲಾದ ದುರ್ದೈವಿ.
ಶಿವಮೊಗ್ಗ(ಜ.24): ಕೆರೆಯಲ್ಲಿ ಈಜು ಕಲಿಯಲು ಹೋದ ಮೂವರು ಯುವಕರಲ್ಲಿ ಓರ್ವ ನೀರು ಪಾಲಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಭೀಮನಕೋಣೆ ಗ್ರಾಮದಲ್ಲಿ ಇಂದು(ಮಂಗಳವಾರ) ನಡೆದಿದೆ. ಸಾಗರದ ರಾಮನಗರದ ಯುವಕ ಯಶವಂತ್(21) ಎಂಬಾತನೇ ನೀರು ಪಾಲಾದ ದುರ್ದೈವಿಯಾಗಿದ್ದಾನೆ.
Add Asianetnews Kannada as a Preferred Source

ಮೃತ ಯಶವಂತ್ ಗಾರ್ಮೆಂಟ್ಸ್ ಕೆಲಸಕ್ಕೆ ಹೋಗುತ್ತಿದ್ದ ಅಂತ ತಿಳಿದು ಬಂದಿದೆ. ಭೀಮನಕೋಣೆಯ ಕೆರೆಯಲ್ಲಿ ಮೂವರು ಯುವಕರು ಈಜು ಕಲಿಯಲು ತೆರಳಿದ್ದರು. ಮೂವರ ಪೈಕಿ ಓರ್ವ ಯಶವಂತ್ ನೀರು ಪಾಲಾಗಿದ್ದಾನೆ.
Educational Tour: ಪ್ರವಾಸಕ್ಕೆ ಹೋದ 4 ನೇ ತರಗತಿ ವಿದ್ಯಾರ್ಥಿನಿ ನೀರು ಪಾಲು!
ಯಶವಂತ್ನ ಮೃತದೇಹಕ್ಕಾಗಿ ಅಗ್ನಿ ಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯಾಚರಣೆ ಆರಂಬಿಸಿದ್ದಾರೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
