ದೇಶ ಕಾಯೋ ಯೋಧ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ವಗ್ರಾಮದಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಸೈನಿಕ. ಯಾರು? ಎಲ್ಲಿ? ಈ ಕೆಳಗಿನಂತಿದೆ ಮಾಹಿತಿ.
ಗದಗ, [ಡಿ.25]: 25ರ ಹರೆಯದ ಯೋಧ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಬೆಳ್ಳೆರಿ ಗ್ರಾಮದಲ್ಲಿ ನಡೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮಹಾಂತೇಶ ಮೇಟಿ (25) ಮೃತ ಸೈನಿಕ. ಇಂದು [ಬುಧವಾರ] ಮಹಾಂತೇಶ ಮೇಟಿ ಬೆಳ್ಳೆರಿ ಗ್ರಾಮದಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಆದ್ರೆ, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಇನ್ನು ವಿಷಯ ತಿಳಿದು ಸ್ಥಳಕ್ಕೆ ನರಗುಂದ ಪೋಲಿಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
ಇನ್ನು 25ರ ಹರೆಯದ ಯುವಕ ಬಾಳಿ ಬದುಕುವ ವಯಸ್ಸು. ಆದ್ರೆ, ಆತ್ಮಹತ್ಯೆ ಮಾಡಿಕೊಳ್ಳುವಂತಹದ್ದು ಏನಾಗಿತ್ತೋ ಏನು ಎನ್ನುವುದು ಮಾತ್ರ ಗೊತ್ತಿಲ್ಲ. ಪೊಲೀಸರ ತನಿಖೆಯಿಂದ ಪ್ರಕರಣ ಕಾರಣ ತಿಳಿದುಬರಬೇಕಿದೆ.
