Asianet Suvarna News Asianet Suvarna News

ಮೈಸೂರು: ಚಾಮುಂಡೇಶ್ವರಿ ದರ್ಶನಕ್ಕೆಂದು ಬಂದಿದ್ದ ಯುವಕ ಹೃದಯಾಘಾತದಿಂದ ಸಾವು..!

ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಿಂದ ದರ್ಶನ ಮುಗಿಸಿ ವಾಪಸ್ ಬರುವಾಗ ರಕ್ಷಿತ್‌ಗೆ ಎದೆ ನೋವು ಕಾಣಿಸಿಕೊಂಡಿದೆ. ದೇವಸ್ಥಾನದ ಹೊರಭಾಗದಲ್ಲಿ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಯುವಕ.

27 years old young man dies due to heart attack in mysuru grg
Author
First Published Jul 27, 2024, 7:41 PM IST | Last Updated Jul 29, 2024, 2:39 PM IST

ಮೈಸೂರು(ಜು.27):  ಚಾಮುಂಡೇಶ್ವರಿ ದೇವಿ ದರ್ಶನಕ್ಕೆಂದು ಬಂದಿದ್ದ ಯುವಕನೊಬ್ಬ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಇಂದು(ಶನಿವಾರ) ನಡೆದಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ಮೂಲದ ರಕ್ಷಿತ್ (27) ಮೃತ ಯುವಕ.

ಇಂದು ವರ್ಧಂತಿ ಹಿನ್ನಲೆಯಲ್ಲಿ ರಕ್ಷಿತ್‌ ಚಾಮುಂಡೇಶ್ವರಿ ದರ್ಶನಕ್ಕೆ ಬಂದಿದ್ದನು. ರಕ್ಷಿತ್ ಸ್ನೇಹಿತರ ಜೊತೆ ದರ್ಶನಕ್ಕೆ ಬಂದಿದ್ದ. 

ವಿಜಯಪುರ: ಹೃದಯಾಘಾತದಿಂದ ಪೈಲ್ವಾನ್ ಶ್ರೀಕಾಂತ್‌ ನಾಯಕ್ ಸಾವು

ದೇವಸ್ಥಾನದಿಂದ ದರ್ಶನ ಮುಗಿಸಿ ವಾಪಸ್ ಬರುವಾಗ ರಕ್ಷಿತ್‌ಗೆ ಎದೆ ನೋವು ಕಾಣಿಸಿಕೊಂಡಿದೆ. ದೇವಸ್ಥಾನದ ಹೊರಭಾಗದಲ್ಲಿ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕೆ.ಆರ್. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

Latest Videos
Follow Us:
Download App:
  • android
  • ios