ಶವ ಸಂಸ್ಕಾರಕ್ಕೆ ತೆರಳಿದ್ದ ಹುನಗುಂದ ತಾಲೂಕಿನ ಮುಗನೂರ, ಮರಡಿ ಬೂದಿಹಾಳ ಗ್ರಾಮದ 29 ಜನರನ್ನು ಆರೋಗ್ಯ ತಪಾಸಣೆ ಮಾಡಿ ಕ್ವಾರಂಟೈನ್| ಚಿಕ್ಕಮ್ಯಾಗೇರಿ ಗ್ರಾಮದಲ್ಲಿ ಸೋಮವಾರ ವ್ಯಕ್ತಿಯೊಬ್ಬ ಮೃತಪಟ್ಟಿದ್ದ| ಆತನಿಗೆ ಕೊರೋನಾ ಸೋಂಕಿದೆ ಎಂದು ಶಂಕೆ| ಅಂತ್ಯಸಂಸ್ಕಾರಕ್ಕೆ ಹೋಗಿದ್ದ ಇವರನ್ನು ಮಂಗಳವಾರ ಕ್ವಾರಂಟೈನ್ಗೆ ಒಳಪಡಿಸಲಾಗಿದೆ|
ಅಮೀನಗಡ(ಜೂ.25): ಕೊರೋನಾ ಶಂಕಿತನ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದ 29 ಜನರನ್ನು ಮುಂಜಾಗ್ರತ ಕ್ರಮವಾಗಿ ಕ್ವಾರಂಟೈನ್ ಮಾಡಿರುವ ಘಟನೆ ಬುಧವಾರ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನಲ್ಲಿ ನಡೆದಿದೆ.
Add Asianetnews Kannada as a Preferred Source

ಇವರಲ್ಲಿ ಇಂದು ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದ ವಿದ್ಯಾರ್ಥಿಯೂ ಸೇರಿದ್ದಾನೆ. ಶವ ಸಂಸ್ಕಾರಕ್ಕೆ ತೆರಳಿದ್ದ ಹುನಗುಂದ ತಾಲೂಕಿನ ಮುಗನೂರ, ಮರಡಿ ಬೂದಿಹಾಳ ಗ್ರಾಮದ 29 ಜನರನ್ನು ಆರೋಗ್ಯ ತಪಾಸಣೆ ಮಾಡಿ ಕ್ವಾರಂಟೈನ್ ಮಾಡಲಾಗಿದೆ.
ಬಾಗಲಕೋಟೆ: ಮಹಾಮಾರಿ ಕೊರೋನಾಗೆ ರೈಲ್ವೆ ನೌಕರ ಬಲಿ?
ಇಲ್ಲಿನ ಚಿಕ್ಕಮ್ಯಾಗೇರಿ ಗ್ರಾಮದಲ್ಲಿ ಸೋಮವಾರ ವ್ಯಕ್ತಿಯೊಬ್ಬ ಮೃತಪಟ್ಟಿದ್ದನು. ಆತನಿಗೆ ಕೊರೋನಾ ಸೋಂಕಿದೆ ಎಂದು ಶಂಕಿಸಲಾಗಿದ್ದು, ಇವರ ಅಂತ್ಯಸಂಸ್ಕಾರಕ್ಕೆ ಹೋಗಿದ್ದ ಇವರನ್ನು ಮಂಗಳವಾರ ಕ್ವಾರಂಟೈನ್ಗೆ ಒಳಪಡಿಸಲಾಗಿದೆ.
