Asianet Suvarna News Asianet Suvarna News

ಬೈಕ್ ಸವಾರನನ್ನು ಉಳಿಸಲು ಹೋಗಿ ಮೂವರು ಸಾವು..!

ಅಡ್ಡ ಬಂದ ಬೈಕಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ಬುಧವಾರ ದೇವನಹಳ್ಳಿಯಲ್ಲಿ ಸಂಭವಿಸಿದೆ.

3 Dies 2 injured after Car overturns In devanahalli
Author
Bengaluru, First Published Jun 26, 2019, 7:16 PM IST

ಬೆಂಗಳೂರು, [ಜೂ.26]:  ಅಡ್ಡ ಬಂದ ಬೈಕ್​ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಕಾರು ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಇಬ್ಬರಿಗೆ ಗಂಭೀರ ಗಾಯವಾಗಿದೆ.

ಬೆಂಗಳೂರು ಗ್ರಾಮಾಮತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಪಾಳ್ಯ ಗೇಟ್​ ಬಳಿ ಬೆಂಗಳೂರು -ಹೈದರಾಬಾದ್​ ರಾಷ್ಟ್ರೀಯ ಹೆದ್ದಾರಿ 7 ರಲ್ಲಿ ಅಪಘಾತ ನಡೆದಿದೆ. ಮೃತ ಗುರುತು ಪತ್ತೆಯಾಗಿಲ್ಲ.

ಹೆದ್ದಾರಿಯಲ್ಲಿ ಕಾರಿಗೆ ಅಡ್ಡ ಬಂದ ಬೈಕ್​ ತಪ್ಪಿಸಲು ಹೋಗಿ ಕಾರು ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ. ದೇವನಹಳ್ಳಿ ವಿಮಾನ ನಿಲ್ದಾಣ ಸಂಚಾರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Follow Us:
Download App:
  • android
  • ios