ಕಾರು ಲಾರಿ ನಡುವೆ ಅಪಘಾತವಾಗಿದ್ದು, ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ರಾಯಚೂರಿನಲ್ಲಿ ಈ ದುರ್ಘಟನೆ ನಡೆದಿದೆ

ರಾಯಚೂರು (ಸೆ.04): ಕಾರು ಮತ್ತು ಲಾರಿ ಮುಖಾ ಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ರಾಯಚೂರಿನಲ್ಲಿ ನಡೆದಿದೆ. 

Add Asianetnews Kannada as a Preferred SourcegooglePreferred

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಚಿಂಚೋಡಿಯಲ್ಲಿ ಅಪಘಾತವಾಗಿದ್ದು, ಮೂವರು ಸಾವಿಗೀಡಾಗಿದ್ದು, ಓರ್ವನಿಗೆ ಗಂಭೀರಗಾಯಗಳಾಗಿದೆ.

ಗಾಯಗೊಂಡ ಕಾರು ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

'ಡ್ರಗ್ಸ್‌ಗೂ ನನಗೂ ಸಂಬಂಧ ಇಲ್ಲರೀ, ಸುಮ್ಮನೆ ಟಾರ್ಗೆಟ್ ಮಾಡಬೇಡಿ' .

ಸ್ಥಳಕ್ಕೆ ಜಾಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತ ನಡೆದ ಸ್ಥಳದಲ್ಲಿ ಸದ್ಯ ಟ್ರಾಫಿಕ್ ಜಾಮ್ ಉಂಟಾಗಿದೆ.