ಕಾಫಿ ತೋಟದಲ್ಲಿ ಮರ ಕಡಿಯುತ್ತಿದ್ದ ಸಂದರ್ಭದಲ್ಲಿ  ವಿದ್ಯುತ್ ಸ್ಪರ್ಶಿಸಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಕೊಡಗು, [ಮೇ.19] : ವಿದ್ಯುತ್ ಸ್ಪರ್ಶಿಸಿ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಇಂದು [ಭಾನುವಾರ] ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಮ್ಮಯ್ಯ, ಅನಿಲ್ ಹಾಗೂ ಕವಿತಾ ಮೃತ ದುರ್ದೈವಿಗಳು. ಮಡಿಕೇರಿ ತಾಲೂಕಿನ ದೊಡ್ಡಪುಲಿಕೋಟು ಗ್ರಾಮದ ಕೆ.ಸುರೇಶ್ ಎಂಬವವರ ಕಾಫಿ ತೋಟದಲ್ಲಿ ಮರ ಕಡಿಯುತ್ತಿದ್ದ ಸಂದರ್ಭದಲ್ಲಿ, ಕಬ್ಬಿಣದ ಏಣಿ ವಿದ್ಯುತ್ ತಂತಿಗೆ ತಗುಲಿ ಈ ದುರ್ಘಟನೆ ಸಂಭವಿಸಿದೆ. 

ಘಟನೆಯಲ್ಲಿ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದರೆ, ಕವಿತಾ ಎಂಬುವವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನು, ಸುನಿತಾ(32) ಎಂಬವವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.