ತಾಯಿಯಿಂದ ಬೇರ್ಪಟ್ಟಿದ್ದ ಮೂರು ಹುಲಿ ಮರಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದ್ದು, ಅದರಲ್ಲಿ ಎರಡು ಹುಲಿ ಮರಿಗಳು ಸಾವನ್ನಪ್ಪಿವೆ
ಮೈಸೂರು (ಮಾ.29):ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ತಾಯಿಯಿಂದ ಬೇರ್ಪಟ್ಟ ಹುಲಿ ಮರಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
Add Asianetnews Kannada as a Preferred Source

ತಾಯಿಯಿಂದ ಬೇರ್ಪಟ್ಟು ಶೋಚನೀಯ ಸ್ಥಿತಿಯಲ್ಲಿದ್ದ ಎರಡು ಹುಲಿ ಮರಿ ಹಾಗೂ ಸ್ಥಳದಲ್ಲೆ ಸಾವನಪ್ಪಿದ ಮತ್ತೊಂದು ಹುಲಿ ಮರಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ತಂದಿದ್ದಾರೆ.
ಸಫಾರಿಗೆ ಹೋಗಿದ್ದವರಿಗೆ ಕಾಣ ಸಿಕ್ತು ಹುಲಿ ಬೇಟೆಯಾಡುವ ಅಪರೂಪದ ಈ ದೃಶ್ಯ.!
ಮೈಸೂರು ಜಿಲ್ಲೆಯ ಹೆಡಿಯಾಲ ಉಪವಿಭಾಗದ ನಗು ವಲಯದಲ್ಲಿ ಮರಿಗಳು ಪತ್ತೆಯಾಗಿದೆ. ಹುಲಿ ಮರಿಗಳನ್ನು ಮೃಗಾಲಯಕ್ಕೆ ತಂದು ಚಿಕಿತ್ದೆ ನೀಡಲಾಗಿದೆ. ಈ ವೇಳೆ ಒಂದು ಮರಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದೆ.
ಮೂರು ಹುಲಿಮರಿಗಳಲ್ಲಿ ಎರಡು ಹುಲಿಮರಿಗಳು ಸಾವನ್ನಪ್ಪಿದ್ದು ಮತ್ತೊಂದು ಹುಲಿಮರಿ ಸುರಕ್ಷಿತವಾಗಿದೆ.
ಸ್ಥಳದಲ್ಲಿ ತಾಯಿ ಹುಲಿಗಾಗಿ ಕೂಂಬಿಂಗ್ ನಡೆಸಲಾಗಿದ್ದು ಸ್ಥಳದಲ್ಲಿ ಹುಲಿಯ ಹೆಜ್ಜೆಗಳು ಪತ್ತೆಯಾಗಿದೆ.
