Asianet Suvarna News Asianet Suvarna News

ಕೋಲಾರ ಭೀಕರ ಅಪಘಾತ: ಮೂವರು ಯುವಕರು ಸ್ಥಳದಲ್ಲೇ ಸಾವು

ಬೆಂಗಳೂರಿಗೆ ಬರಲು ರೈಲ್ವೇ ನಿಲ್ದಾಣಕ್ಕೆ ಹೊರಟಿದ್ದ ಯುವಕರ ಬೈಕ್ ಅಪಘಾತವಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ .

 

3 youth died on spot in Kolar Bike accident
Author
Bangalore, First Published Mar 5, 2020, 9:59 AM IST

ಕೋಲಾರ(ಮಾ.05) : ಬೆಂಗಳೂರಿಗೆ ಬರಲು ರೈಲ್ವೇ ನಿಲ್ದಾಣಕ್ಕೆ ಹೊರಟಿದ್ದ ಯುವಕರ ಬೈಕ್ ಅಪಘಾತವಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ . ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕು ಹೊಗಳಗೆರೆ ರಸ್ತೆಯಲ್ಲಿ ಘಟನೆ ನಡೆದಿದೆ. ಶ್ರೀನಿವಾಸಪುರದ ಗಾಂಧಿನಗರ ನಿವಾಸಿಗಳಾದ ಯಶ್ವಂತ್(20), ದೊಡ್ಡ ವೆಂಕಟೇಶಪ್ಪ (50),  ಯಲ್ಲಪ್ಪ (18)
ಮೃತರು.

ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರ ಬೇಟಿ ಪರಿಶೀಲನೆ

ಶ್ರೀನಿವಾಸಪುರದಿಂದ ಬೆಂಗಳೂರಿಗೆ ತೆರಳಲು ರೈಲ್ವೆ ನಿಲ್ದಾಣಕ್ಕೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತಕ್ಕೊಳಗಾದ ಬೈಕ್‌ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

Follow Us:
Download App:
  • android
  • ios