ಮದುವೆ ದಿಬ್ಬಣದ ಬಸ್ ಉರುಳಿ ಬಿದ್ದು 30 ಕ್ಕೂ ಅಧಿಕ ಮಂದಿ ಗಾಯಗೊಂಡು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಿಂದ ಮದುವೆ ಮನೆಯಲ್ಲಿ ಸಂಪೂರ್ಣ ದುಃಖದ ವಾತಾವರಣ ಮನೆ ಮಾಡಿದೆ. 

ನಂಜನಗೂಡು (ಮಾ.21): ಚಾಲಕನ ನಿಯಂತ್ರಣ ತಪ್ಪಿ ಮದುವೆ ದಿಬ್ಬಣದ ಬಸ್ ಕಂದಕಕ್ಕೆ ಉರುಳಿದ್ದು, ಸುಮಾರು 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

Add Asianetnews Kannada as a Preferred SourcegooglePreferred

ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಕಂದೇಗಾಲ ಗ್ರಾಮದಲ್ಲಿ ಘಟನೆ ನಡೆದಿದ್ದು, ರಾತ್ರಿ ರಿಸೆಪ್ಷನ್ ಮುಗಿಸಿ ಗ್ರಾಮಸ್ಥರನ್ನ ವಾಪಸ್ ಕರೆದೊಯ್ಯುತ್ತಿದ್ದ ವೇಳೆ ಖಾಸಗಿ ಬಸ್ ಉರುಳಿ ಬಿದ್ದು ಈ ದುರ್ಘಟನೆ ಸಂಭವಿಸಿದೆ. 

ಕಂದೇಗಾಲದ ನಾಗೇಂದ್ರ ಹಾಗೂ ಹೆಚ್.ಡಿ.ಕೋಟೆ ತಾಲೂಕಿನ ಬೊಪ್ಪನಹಳ್ಳಿ ಗ್ರಾಮದ ನಾಗದೇವಿ ಎಂಬುವರ ವಿವಾಹಕಾರ್ಯಕ್ರಮ ಸರಗೂರು ತಾಲೂಕಿನ ಅಂಬೇಡ್ಕರ್ ಸಮುದಾಯಭವನದಲ್ಲಿ ನಡೆಸಲಾಗಿತ್ತು. 

ಆಸಿಡ್ ಲಾರಿ ಪಲ್ಟಿ : ಇಬ್ಬರು ಸಜೀವ ದಹನ ...

 ಈ ದುರ್ಘಟನೆಯಿಂದ ಮದುವೆ ಮನೆಯಲ್ಲಿ ಸಂಪೂರ್ಣ ದುಃಖದ ವಾತಾವರಣ ನಿರ್ಮಾಣವಾಗಿದೆ. ಗಾಯಾಳುಗಳಿಗೆ ಮೈಸೂರು ಹಾಗೂ ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

ಈ ದುರ್ಘಟನೆ ನಡೆಯುತ್ತಿದ್ದಂತೆ ಸ್ಥಳದಿಂದ ಲಾರಿ ಚಾಲಕ ಪರಾರಿಯಾಗಿದ್ದಾನೆ. ಚಾಲಕನ ಬೇಜವಾಬ್ದಾರಿಯಿಂದ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ. ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.