ಬೆಂಗಳೂರು: ಬಿಎಂಟಿಸಿ ಬಸ್ ಚಕ್ರಕ್ಕೆ ಸಿಲುಕಿ ಯುವಕ ಸಾವು
ಪೀಣ್ಯ ಸಂಚಾರಿ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣಕ್ಕೆ ಬಿಎಂಟಿಸಿ ಬಸ್ ಚಾಲಕನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಪೊಲೀಸರು.
ಬೆಂಗಳೂರು(ಡಿ.13): ಬಿಎಂಟಿಸಿ ಬಸ್ ಚಕ್ರಕ್ಕೆ ಸಿಲುಕಿ ಯುವಕನೋರ್ವ ಸಾವನ್ನಪ್ಪಿದ ಘಟನೆ ನಗರದ ಪೀಣ್ಯದ 14ನೇ ಕ್ರಾಸ್ ಬಳಿ ನಿನ್ನೆ(ಸೋಮವಾರ) ಸಂಜೆ ನಡೆದಿದೆ. ಮೃತ ಯುವಕನನ್ನ ದೀಪಕ್ (30) ಅಂತ ಗುರುತಿಸಲಾಗಿದೆ. ಓವರ್ ಟೇಕ್ ಮಾಡುವ ಬರದಲ್ಲಿ ಈ ಅವಘಡ ಸಂಭವಿಸಿದೆ ಅಂತ ತಿಳಿದು ಬಂದಿದೆ.
ಬಿಎಂಟಿಸಿ ಬಸ್ ಎನ್.ಹೆಚ್-4ರ ಕಡೆಯಿಂದ ಕಾಮಾಕ್ಷಿಪಾಳ್ಯದ ಕಡೆ ತೆರಳುತಿತ್ತು, ಈ ವೇಳೆ ದೀಪಕ್ ಎಡಭಾಗದಿಂದ ಓವರ್ ಟೇಕ್ ಮಾಡಲ ಯತ್ನಿಸಿದ್ದನು. ಈ ವೇಳೆ ಹಿಂಬದಿಯ ಟೈರ್ಗೆ ಸಿಲುಕಿ ದೀಪಕ್ ಮೃತಪಟ್ಟಿದ್ದಾನೆ.
ಸ್ನೇಹಿತನ ಪೋಸ್ಟ್ಮಾರ್ಟಮ್ ನಾನೇ ಮಾಡೋದು ಬಂತ್ರಿ: ಕಣ್ಣೀರಿಟ್ಟ ಜೇವರ್ಗಿ ಸಿಪಿಐ
ಬೈಕ್ ಚಲಾಯಿಸುವ ವೇಳೆ ದೀಪಕ್ ಹೆಲ್ಮೆಟ್ ಧರಿಸಿರಲಿಲ್ಲ ಅಂತ ತಿಳಿದು ಬಂದಿದೆ. ಈ ಸಂಬಂಧ ಪೀಣ್ಯ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಬಿಎಂಟಿಸಿ ಬಸ್ ಚಾಲಕನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಪೊಲೀಸರು.