ಟ್ರಾಕ್ಟರ್ ಪಲ್ಟಿಯಾಗಿ ನಾಲ್ವರ ಸಾವು| ತುಮಕೂರು ಜಿಲ್ಲೆಯ ತಿಪಟೂರು ತಾ. ಹತ್ಯಾಳು ನರಸಿಂಹಸ್ವಾಮಿ ಬೆಟ್ಟದಲ್ಲಿ ಸಂಭವಿಸಿದ ಘಟನೆ| ಕಡಿದಾದ ಇಳಿಜಾರು ಇದ್ದದ್ದರಿಂದ ನಿಯಂತ್ರಣಕ್ಕೆ ಬಾರದ ಟ್ಯಾಕ್ಟರ್ ಪಲ್ಟಿ.

ತುಮಕೂರು, [ಮೇ.11]: ಟ್ರಾಕ್ಟರ್ ಪಲ್ಟಿಯಾಗಿ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ಇಂದು [ಶನಿವಾರ] ತುಮಕೂರಿನ ತಿಪಟೂರು ತಾಲ್ಲೂಕು ಹತ್ಯಾಳು ನರಸಿಂಹಸ್ವಾಮಿ ಬೆಟ್ಟದಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೃತರು ಮತ್ತು ಗಾಯಾಳುಗಳು ಚಿಕ್ಕನಾಯಕನಹಳ್ಳಿ ತಾಲೂಕಿನ‌ ಮಾದಾಪುರ ಗ್ರಾಮದವರು. ಟ್ರಾಕ್ಟರ್ ಚಾಲಕ ಶಿವಲಿಂಗಪ್ಪ (45), ಶಂಕರಮ್ಮ(45), ದೊಡ್ಡಲಿಂಗಯ್ಯ (40) ಮೃತ ದುರ್ದೈವಿಗಳು. 

7 ವರ್ಷದ ಭುವನ್ ಆಸ್ಪತ್ರೆಗೆ ತೆರಳುವಾಗ ಮಾರ್ಗ ‌ಮಧ್ಯೆ ಕೊನೆಯುಸಿರೆಳೆದಿದ್ದಾನೆ. ಟ್ರಾಕ್ಟರ್​​ನಲ್ಲಿ ಸುಮಾರು 12 ಜನರಿದ್ದರು ಎಂದು ತಿಳಿದುಬಂದಿದೆ.

ನರಸಿಂಹ ಸ್ವಾಮಿ ದೇವಾಲಯದಿಂದ ವಾಪಸ್ಸಾಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಕಡಿದಾದ ಇಳಿಜಾರು ಇದ್ದಿದ್ದರಿಂದ ನಿಯಂತ್ರಣಕ್ಕೆ ಬಾರದ ಟ್ರಾಕ್ಟರ್ ಪಲ್ಟಿಯಾಗಿದೆ.