ಭದ್ರಾವತಿ: ಬೀದಿ ನಾಯಿಗಳ ದಾಳಿ, 4 ವರ್ಷದ ಬಾಲಕ ಸಾವು
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ದೊಣಬಘಟ್ಟ ಗ್ರಾಮದಲ್ಲಿ ನಡೆದ ಘಟನೆ, ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸೈಯದ್ ಮದನಿ ಸಾವು
ಶಿವಮೊಗ್ಗ(ಡಿ.01): ಬೀದಿ ನಾಯಿಗಳ ದಾಳಿಗೆ ಗಾಯಗೊಂಡಿದ್ದ 4 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ದೊಣಬಘಟ್ಟ ಗ್ರಾಮದಲ್ಲಿ ಇಂದು(ಗುರುವಾರ) ನಡೆದಿದೆ. ಸೈಯದ್ ಮದನಿ ಎಂಬಾತನೇ ಮೃತಪಟ್ಟ ದುರ್ದೈವಿ ಬಾಲಕನಾಗಿದ್ದಾನೆ.
ನಿನ್ನೆ(ಬುಧವಾರ) ಸಂಜೆ 4 ಗಂಟೆ ಸುಮಾರಿಗೆ ಮಗುವಿನ ತಂದೆ ಜಮೀನಿಗೆ ಹೋಗಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ತಂದೆಯನ್ನ ಹಿಂಬಾಲಿಸಿಕೊಂಡು ಹೋಗುವಾಗ 7 ರಿಂದ 8 ಬೀದಿ ನಾಯಿಗಳ ಹಿಂಡು ಬಾಲಕನ ಮೇಲೆ ದಾಳಿ ಮಾಡಿತ್ತು. ಇದರಿಂದಾಗಿ ತೀವ್ರ ಅಸ್ವಸ್ಥತೆಯಿಂದ ಬಳಲಿದ ಬಾಲಕನನ್ನು ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸೈಯದ್ ಮದನಿ ಸಾವನಪ್ಪಿದ್ದಾನೆ.
ಬಳಿಗಾರ್, ಬೆಂಬಲಿಗರ ಆಗಮನದಿಂದ ಬಿಜೆಪಿಗೆ ಆನೆಬಲ: ಬಿ.ಎಸ್.ಯಡಿಯೂರಪ್ಪ
ನಾಯಿಗಳ ದಾಳಿಯ ವೇಳೆ ಬಾಲಕನ ತಂದೆ ಸ್ವಲ್ಪ ದೂರದಲ್ಲಿ ಯಂತ್ರದಲ್ಲಿ ಭತ್ತ ಕಟಾವು ಮಾಡಿಸುತ್ತಿದ್ದ, ಯಂತ್ರದ ಶಬ್ದಕ್ಕೆ ನಾಯಿ ದಾಳಿ ತಿಳಿಯದೆ ಬಾಲಕನನ್ನ ಕಳೆದುಕೊಂಡಿದ್ದಾರೆ.