Asianet Suvarna News Asianet Suvarna News

ಭದ್ರಾವತಿ: ಬೀದಿ ನಾಯಿಗಳ ದಾಳಿ, 4 ವರ್ಷದ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ದೊಣಬಘಟ್ಟ ಗ್ರಾಮದಲ್ಲಿ ನಡೆದ ಘಟನೆ, ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸೈಯದ್ ಮದನಿ ಸಾವು 

4 Year Old Boy Dies Due to Street Dogs Attack at Bhadravathi in Shivamogga grg
Author
First Published Dec 1, 2022, 11:00 AM IST

ಶಿವಮೊಗ್ಗ(ಡಿ.01):  ಬೀದಿ ನಾಯಿಗಳ ದಾಳಿಗೆ ಗಾಯಗೊಂಡಿದ್ದ 4 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ದೊಣಬಘಟ್ಟ ಗ್ರಾಮದಲ್ಲಿ ಇಂದು(ಗುರುವಾರ) ನಡೆದಿದೆ. ಸೈಯದ್ ಮದನಿ ಎಂಬಾತನೇ ಮೃತಪಟ್ಟ ದುರ್ದೈವಿ ಬಾಲಕನಾಗಿದ್ದಾನೆ. 

ನಿನ್ನೆ(ಬುಧವಾರ) ಸಂಜೆ  4 ಗಂಟೆ ಸುಮಾರಿಗೆ ಮಗುವಿನ ತಂದೆ ಜಮೀನಿಗೆ ಹೋಗಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ತಂದೆಯನ್ನ ಹಿಂಬಾಲಿಸಿಕೊಂಡು ಹೋಗುವಾಗ 7 ರಿಂದ 8 ಬೀದಿ ನಾಯಿಗಳ ಹಿಂಡು ಬಾಲಕನ ಮೇಲೆ ದಾಳಿ ಮಾಡಿತ್ತು. ಇದರಿಂದಾಗಿ ತೀವ್ರ ಅಸ್ವಸ್ಥತೆಯಿಂದ ಬಳಲಿದ ಬಾಲಕನನ್ನು ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸೈಯದ್ ಮದನಿ ಸಾವನಪ್ಪಿದ್ದಾನೆ.

ಬಳಿಗಾರ್‌, ಬೆಂಬಲಿಗರ ಆಗಮನದಿಂದ ಬಿಜೆಪಿಗೆ ಆನೆಬಲ: ಬಿ.ಎಸ್‌.ಯಡಿಯೂರಪ್ಪ

ನಾಯಿಗಳ ದಾಳಿಯ ವೇಳೆ ಬಾಲಕನ ತಂದೆ ಸ್ವಲ್ಪ ದೂರದಲ್ಲಿ ಯಂತ್ರದಲ್ಲಿ ಭತ್ತ ಕಟಾವು ಮಾಡಿಸುತ್ತಿದ್ದ, ಯಂತ್ರದ ಶಬ್ದಕ್ಕೆ ನಾಯಿ ದಾಳಿ ತಿಳಿಯದೆ ಬಾಲಕನನ್ನ ಕಳೆದುಕೊಂಡಿದ್ದಾರೆ. 
 

Follow Us:
Download App:
  • android
  • ios