ಮುಂಬರುವ ಜೂನ್ವರೆಗೆ ಸರ್ಕಾರದ ಆರ್ಥಿಕ ಸಹಾಯ ಪಡೆದು ಸಾರಿಗೆ ನೌಕರರಿಗೆ ಸಂಬಳ ಕೊಡುವ ವ್ಯವಸ್ಥೆ| ಮೂರು ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಗೆಲುವು ಸಾಧಿಸುವುದು ಖಚಿತ. ಆದರೆ ಎಷ್ಟು ಅಂತರದಲ್ಲಿ ಗೆಲವು ಸಾಧಿಸುತ್ತಾರೆ ಎಂದು ನೋಡಬೇಕು: ಸವದಿ|
ಅಥಣಿ(ಏ.30): ಕಳೆದ ವರ್ಷದ ಲಾಕ್ಡೌನ್ ಮತ್ತು ಇತ್ತೀಚೆಗೆ ಸಾರಿಗೆ ನೌಕರರ ಮುಷ್ಕರದಿಂದಾಗಿ ಇಲಾಖೆಗೆ ಸುಮಾರು 4000 ಕೋಟಿ ನಷ್ಟವಾಗಿದೆ ಎಂದು ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
Add Asianetnews Kannada as a Preferred Source

ಗುರುವಾರ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಜೂನ್ವರೆಗೆ ಸರ್ಕಾರದ ಆರ್ಥಿಕ ಸಹಾಯ ಪಡೆದು ಸಾರಿಗೆ ನೌಕರರಿಗೆ ಸಂಬಳ ಕೊಡುವ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಸಾರಿಗೆ ಮುಷ್ಕರ: ನೌಕರರಿಗೆ ಲಾಭಕ್ಕಿಂತ ಹಾನಿಯೇ ಜಾಸ್ತಿ..!
ಉಪಚುನಾವಣೆಯ ಫಲಿತಾಂಶ ಕುರಿತು ಹೇಳಿದ ಅವರು, ಮೂರು ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಗೆಲುವು ಸಾಧಿಸುವುದು ಖಚಿತ. ಆದರೆ ಎಷ್ಟುಅಂತರದಲ್ಲಿ ಗೆಲವು ಸಾಧಿಸುತ್ತಾರೆ ಎಂದು ನೋಡಬೇಕು ಎಂದು ತಿಳಿಸಿದ್ದಾರೆ.
