ಜೆಸಿಬಿ ಶಿರಹಟ್ಟಿಯಿಂದ ಮಾಗಡಿ ಕಡೆಗೆ ಹೊರಟ್ಟಿತ್ತು. ಈ ವೇಳೆ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮಗುವಿಗೆ ಜೆಸಿಬಿ ಡಿಕ್ಕಿ ಹೊಡೆದಿದೆ. ಜೆಸಿಬಿ ಡಿಕ್ಕಿಯಿಂದ ಮಗುವಿನ ತಲೆಗೆ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದೆ. 

ಗದಗ(ಜ.11): ಜೆಸಿಬಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಐದು ವರ್ಷದ ಮಗುವೊಂದು ದಾರುಣವಾಗಿ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದ ಶಬ್ಬೀರ್ ನಗರದಲ್ಲಿ ಇಂದು(ಗುರುವಾರ) ನಡೆದಿದೆ. 

Add Asianetnews Kannada as a Preferred SourcegooglePreferred

ಜೆಸಿಬಿ ಡಿಕ್ಕಿಯಾಗಿ ಮನ್ವಿತ್ ಏರಿಮನಿ ಎಂಬ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಜೆಸಿಬಿ ಶಿರಹಟ್ಟಿಯಿಂದ ಮಾಗಡಿ ಕಡೆಗೆ ಹೊರಟ್ಟಿತ್ತು. ಈ ವೇಳೆ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮಗುವಿಗೆ ಜೆಸಿಬಿ ಡಿಕ್ಕಿ ಹೊಡೆದಿದೆ. ಜೆಸಿಬಿ ಡಿಕ್ಕಿಯಿಂದ ಮಗುವಿನ ತಲೆಗೆ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದೆ. 

ತುಮಕೂರು: ದ್ವಿಚಕ್ರವಾಹನಗಳಿಗೆ ಕಾರು ಡಿಕ್ಕಿ, ಇಬ್ಬರು ವಿದ್ಯಾರ್ಥಿಗಳ ಸಾವು

ಜೆಸಿಬಿ ಚಾಲಕನ ನಿರ್ಲಕ್ಷ್ಯ, ಅಜಾಗರೂಕತೆಯೆ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ. ಘಟನಾ ಸ್ಥಳಕ್ಕೆ ಶಿರಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಜೆಸಿಬಿ ಚಾಲಕನ ಮೈಲಾರಪ್ಪ ಹಲವಾಗಲಿಯನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ.