ರಾಜಾಪುರ ಡ್ಯಾಮ್ ಹಾಗೂ ದೂದಗಂಗಾ ನದಿಯಲ್ಲಿ ನೀರಿನ ಪ್ರಮಾಣದಲ್ಲಿನ ಏರಿಕೆ| ಕೃಷ್ಣಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ| ಹಿಪ್ಪರಗಿ ಜಲಾಶಯಕ್ಕೆ ಶುಕ್ರವಾರ 55,800 ಕ್ಯುಸೆಕ್ ನೀರು ಹರಿದು ಬಂದಿದೆ|
ಬಾಗಲಕೋಟೆ(ಜೂ.20): ಮಹಾರಾಷ್ಟ್ರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ ನದಿ ಪಾತ್ರದಲ್ಲಿ ನೀರಿನ ಸಂಗ್ರಹ ಹೆಚ್ಚಾಗುತ್ತಿದ್ದು, ಬಾಗಲಕೋಟೆ ಜಿಲ್ಲೆಯ ಹಿಪ್ಪರಗಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿಯೂ ಗಣನೀಯ ಏರಿಕೆ ಕಂಡಿದೆ.
Add Asianetnews Kannada as a Preferred Source

ರಾಜಾಪುರ ಡ್ಯಾಮ್ ಹಾಗೂ ದೂದಗಂಗಾ ನದಿಯಲ್ಲಿ ನೀರಿನ ಪ್ರಮಾಣದಲ್ಲಿನ ಏರಿಕೆಯಿಂದ ಕೃಷ್ಣಾ ನದಿಯಲ್ಲಿ ಸಹಜವಾಗಿ ನೀರಿನ ಹರಿವು ಹೆಚ್ಚಾಗುತ್ತಿದ್ದು ಹಿಪ್ಪರಗಿ ಜಲಾಶಯಕ್ಕೆ ಶುಕ್ರವಾರ 55,800 ಕ್ಯುಸೆಕ್ ನೀರು ಹರಿದು ಬಂದಿದೆ.
ಬಾಗಲಕೋಟೆ: ನವ ವಿವಾಹಿತನಿಗೆ ಕೊರೋನಾ ದೃಢ: ಮದುವೆಗೆ ಬಂದಿದ್ದವರಲ್ಲಿ ಹೆಚ್ಚಿದ ಆತಂಕ
ಮಹಾರಾಷ್ಟ್ರದಿಂದ ಜಿಲ್ಲೆಯ ಕೃಷ್ಣಾ ನದಿಗೆ 63200 ಕ್ಯುಸೆಕ್ ನೀರು ಹರಿದು ಬಂದಿದ್ದು, ಹಿಪ್ಪರಗಿ ಜಲಾಶಯಕ್ಕೆ ಹರಿದು ಬಂದ ನೀರಿನ ಪ್ರಮಾಣದಷ್ಟೆನೀರನ್ನು ಹೊರಗೆ ಬಿಡಲಾಗುತ್ತಿರುವುದರಿಂದ ಜಮಖಂಡಿ, ತೇರದಾಳ, ರಬಕವಿ-ಬನಹಟ್ಟಿ ಸೇರಿದಂತೆ ಇತರ ನದಿ ತೀರದ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
