ಚರಂಡಿಯಲ್ಲಿ ಗುರುವಾರ ರಾತ್ರಿ ಸುಮಾರಿಗೆ ಹೆಬ್ಬಾವು ಪ್ರತ್ಯಕ್ಷವಾಗಿದ್ದು, ಇದನ್ನು ಕಂಡ ಜನತೆ ಭಯಭೀತರಾಗಿದ್ದರು. 

ಗುರುಮಠಕಲ್‌(ಜೂ.10): ಗುರುಮಠಕಲ್‌ ಪಟ್ಟಣದ ಪೊಲೀಸ್‌ ಠಾಣೆ ಸಮೀಪದ ಚರಂಡಿಯಲ್ಲಿ ಕಾಣಿಸಿಕೊಂಡ ಭಾರೀ ಗಾತ್ರದ ಹೆಬ್ಬಾವನ್ನು ಉರಗ ತಜ್ಞ ನರಸಿಂಹಲು ಅವರು ಸೆರೆ ಹಿಡಿದು ಕಾಡಿಗೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ.

Add Asianetnews Kannada as a Preferred SourcegooglePreferred

ಪಟ್ಟಣದ ಚರಂಡಿಯಲ್ಲಿ ಗುರುವಾರ ರಾತ್ರಿ ಸುಮಾರಿಗೆ ಹೆಬ್ಬಾವು ಪ್ರತ್ಯಕ್ಷವಾಗಿದ್ದು, ಇದನ್ನು ಕಂಡ ಜನತೆ ಭಯಭೀತರಾಗಿದ್ದರು. 

ಯಾದಗಿರಿ: ಕುಡಿಯಲು ಯೋಗ್ಯವಲ್ಲದ ನೀರು ಸರಬರಾಜು

ತಕ್ಷಣ ಈ ವಿಷಯ ನರಸಿಂಹಲು ಅವರ ಗಮನಕ್ಕೆ ಬಂದಾಗ ಸ್ಥಳಕ್ಕಾಗಮಿಸಿ 8 ಅಡಿ ಉದ್ದದ ಹೆಬ್ಬಾವನ್ನು ಹಿಡಿದು ಅರಣ್ಯಕ್ಕೆ ಬಿಟ್ಟಿದ್ದಾರೆ. ಇದರಿಂದ ಜನರು ನಿಟ್ಟುಸಿರುಬಿಟ್ಟರು.