Asianet Suvarna News Asianet Suvarna News

ಬೆಳಗಾವಿ ಬಳಿ ಭೀಕರ ಅಪಘಾತ: ಕೂಲಿ ಕೆಲಸಕ್ಕೆ ತೆರಳುತ್ತಿದ್ದ 7 ಕಾರ್ಮಿಕರ ದುರ್ಮರಣ

*   ಬೆಳಗಾವಿ ತಾಲೂಕಿನ ಕಲ್ಯಾಳ್‌ಪೂಲ್‌ ಬಳಿ ನಡೆದ ಘಟನೆ 
*   ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕ್ರೂಸರ್ ವಾಹನ
*   ಮೃತರರು ಬೆಳಗಾವಿ ಜಿಲ್ಲೆ ಗೋಕಾಕ್‌ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದವರು 
 

8 Workers Killed in Road Accident in Belagavi grg
Author
Bengaluru, First Published Jun 26, 2022, 10:38 AM IST

ಬೆಳಗಾವಿ(ಜೂ.26):  ಚಾಲಕನ ನಿಯಂತ್ರಣ ತಪ್ಪಿದ ಕ್ರೂಸರ್ ವಾಹನವೊಂದು ನಾಲೆಗೆ ಬಿದ್ದ ಪರಿಣಾಮ 7 ಮಂದಿ ಕೂಲಿ ಕಾರ್ಮಿಕರು ದಾರುಣವಾಗಿ ಮೃತಪಟ್ಟ ಘಟನೆ ತಾಲೂಕಿನ ಕಲ್ಯಾಳ್‌ಪೂಲ್‌ ಬಳಿ ಇಂದು(ಭಾನುವಾರ) ನಡೆದಿದೆ. 

ಕ್ರೂಸರ್‌ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ 7 ಮಂದಿ ಮೃತಪಟ್ಟಿದ್ದಾರೆ. ಮೃತರನ್ನ ಜಿಲ್ಲೆ ಗೋಕಾಕ್‌ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದವರು ಅಂತ ತಿಳಿದು ಬಂದಿದೆ. 

ವಿಜಯಪುರ: ಬೈಕ್‌-ಬುಲೆರೋ ಮಧ್ಯೆ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು

ಕ್ರೂಸರ್‌ ವಾಹನದಲ್ಲಿ ಒಟ್ಟು 17 ಮಂದಿ ಪ್ರಯಾಣಿಸುತ್ತಿದ್ದರು. ಇವರೆಲ್ಲರೂ ಕೂಲಿ ಕೆಲಸಕ್ಕೆ ತೆರಳುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. 

Follow Us:
Download App:
  • android
  • ios