Asianet Suvarna News Asianet Suvarna News

ಆತ್ಮಹತ್ಯೆಗೆ ಯತ್ನಿಸಿದವನ ಕಾಪಾಡಿದ ಪೊಲೀಸ್

ಕೌಟುಂಬಿಕ ಕಲಹದಿಂದ ಮನನೊಂದ ವೃದ್ಧನೋರ್ವ ತೀತಾ ಜಲಾಶಯಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿ ನೀರಿನಲ್ಲಿ ಮುಳುಗುತ್ತಿದ್ದಾಗ ಪ್ರವಾಸಿ ಮಿತ್ರ ಪೊಲೀಸ್ ಜೂಲ್ ಫಕ್ರೋದ್ದಿನ್ ರಕ್ಷಣೆ ಮಾಡಿರುವ ಘಟನೆ   ನಡೆದಿದೆ.  

A policeman saved a suicide attempt snr
Author
First Published Jan 26, 2024, 10:23 AM IST

ಕೊರಟಗೆರೆ: ಕೌಟುಂಬಿಕ ಕಲಹದಿಂದ ಮನನೊಂದ ವೃದ್ಧನೋರ್ವ ತೀತಾ ಜಲಾಶಯಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿ ನೀರಿನಲ್ಲಿ ಮುಳುಗುತ್ತಿದ್ದಾಗ ಪ್ರವಾಸಿ ಮಿತ್ರ ಪೊಲೀಸ್ ಜೂಲ್ ಫಕ್ರೋದ್ದಿನ್ ರಕ್ಷಣೆ ಮಾಡಿರುವ ಘಟನೆ ಗುರುವಾರ ನಡೆದಿದೆ. ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ತೀತಾ ಗ್ರಾಪಂ ವ್ಯಾಪ್ತಿಯ ಗೊರವನಹಳ್ಳಿ ಶ್ರೀಮಹಾಲಕ್ಷ್ಮೀ ದೇವಾಲಯದ ಸಮೀಪದ ತೀತಾ ಜಲಾಶಯದಲ್ಲಿ ದುರ್ಘಟನೆ ನಡೆದಿದೆ. ಗೊರವನಹಳ್ಳಿಯ ನಿವಾಸಿಯಾದ ಚಿದಾನಂದಮೂರ್ತಿ(೫೮) ಅಪಾಯದಿಂದ ಪಾರಾದ ವೃದ್ಧನಾಗಿದ್ದು, ಕೌಟುಂಬಿಕ ಕಲಹದಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ.

ತೀತಾ ಜಲಶಯದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನ ಕಾಪಾಡಿದ ಪ್ರವಾಸಿ ಮಿತ್ರ ಪೊಲೀಸ್ ಜೂಲ್ ಫಕ್ರೋದ್ದಿನ್ ಅವರಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಕೋಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಹಿಳೆಯೊಬ್ಬರಿಗೆ ಚಾಲಾಕಿ ವಂಚಕರು ಟೋಪಿ

ಬೆಂಗಳೂರು(ಜ.23):  ಅಧಿಕ ಲಾಭದಾಸೆ ತೋರಿಸಿ ₹38 ಲಕ್ಷ ವಸೂಲಿ ಮಾಡಿದವರನ್ನು ಹಿಡಿಯುವುದಾಗಿ ಸೈಬರ್ ಕ್ರೈಂ ಪೊಲೀಸರ ಸೋಗಿನಲ್ಲೇ ಮಹಿಳೆಯೊಬ್ಬರಿಗೆ ಚಾಲಾಕಿ ವಂಚಕರು ಟೋಪಿ ಹಾಕಿದ್ದಾರೆ.

ಸ್ಯಾಂಕಿ ರಸ್ತೆಯ ಭಾರ್ಗವಿ ರಾವ್‌ ಮೋಸ ಹೋಗಿದ್ದು, ಈ ಸಂಬಂಧ ಕೇಂದ್ರ ವಿಭಾಗದ ಸಿಇಎನ್‌ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದಾರೆ. ಬ್ಯಾಂಕ್‌ ಖಾತೆಗಳ ಮೂಲಕ ಹಣ ವರ್ಗಾವಣೆ ಸೇರಿದಂತೆ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ನಡೆಸಿದ್ದಾರೆ.

ಬ್ಯಾಂಕ್‌ಗೆ ವಂಚನೆ ಪ್ರಕರಣ; ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೊಂದು ಸಂಕಷ್ಟ!

ಕೆಲ ದಿನಗಳ ಹಿಂದೆ ಭಾರ್ಗವಿ ಅವರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ, ನಿಮಗೆ ಅರೆಕಾಲಿಕ ಉದ್ಯೋಗ ಕೊಡುವುದಾಗಿ ಹೇಳಿದ್ದಾನೆ. ಇದರಲ್ಲಿ ಸುಲಭವಾಗಿ ಲಕ್ಷ ಲಕ್ಷ ಹಣ ಸಂಪಾದಿಸಬಹುದು ಎಂದಿದ್ದ. ಈ ಮಾತಿಗೆ ಭಾರ್ಗವಿ ಸಮ್ಮತಿಸಿದಾಗ ಅವರಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕಳುಹಿಸಿದ್ದ. ತಾವು ಕಳುಹಿಸಿದ ಕಂಪನಿಯ ಲಿಂಕ್ ಬಳಸಿ ಹಣ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ಗಳಿಸಬಹುದು ಎಂದು ಆಸೆ ತೋರಿಸಿದ್ದ. ಅಂತೆಯೇ ಆರೋಪಿ ಸೂಚಿಸಿದ ಬ್ಯಾಂಕ್ ಖಾತೆಗೆ ಹಂತ ಹಂತವಾಗಿ ₹38.9 ಲಕ್ಷವನ್ನು ಅವರು ಸಂದಾಯ ಮಾಡಿದ್ದರು. ಇದಾದ ಬಳಿಕ ಭಾರ್ಗವಿ ಅವರಿಗೆ ಲಾಭಾಂಶ ನೀಡಿಲ್ಲ. ಹೀಗಿರುವಾಗ ಮತ್ತೆ ಅವರಿಗೆ ಕರೆ ಮಾಡಿದ ಕಿಡಿಗೇಡಿ, ನಾವು ಸೈಬರ್ ಕ್ರೈಂ ಪೊಲೀಸರು ಎಂದು ಪರಿಚಯಿಸಿಕೊಂಡಿದ್ದಾನೆ. ಆಗ ತಾವು ಕಳೆದುಕೊಂಡಿರುವ ಹಣವನ್ನು ಮರಳಿ ಕೊಡಿಸುವುದಾಗಿ ನಂಬಿಸಿ ಭಾರ್ಗವಿ ಅವರಿಂದ ₹40 ಸಾವಿರ ಸುಲಿಗೆ ಮಾಡಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖವಾಗಿದೆ.

Follow Us:
Download App:
  • android
  • ios